ಮಂಗಳೂರು : ಮಂಗಳೂರಲ್ಲಿ ಇಂದು ಘೋರವಾದ ದುರಂತ ಸಂಭವಿಸಿದ್ದು, ಶಾಲೆಯ ಮೇಲ್ಚಾವಣಿ ಕುಸಿದು ಓರ್ವ ಯುಕೆಜಿ ವಿದ್ಯಾರ್ಥಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಂಗಳೂರಿನ ಹೊರವಲಯದಲ್ಲಿರುವ ಕೆಂಜಾರು ಎಂಬ ಗ್ರಾಮದಲ್ಲಿ ನಡೆದಿದೆ.
ಖಾಸಗಿ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ದುರಂತ ಸಂಭವಿಸಿದೆ.ಯುಕೆಜಿ ವಿದ್ಯಾರ್ಥಿ ಶೋನಿತ್ ಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತರಗತಿ ನಡೆಯುವಾಗ ಜೋರಾಗಿ ಗಾಳಿ ಬೀಸಿ ಶಾಲೆಯ ಮೇಲ್ಚಾವಣಿ ಕುಸಿದು ಬಿದ್ದಿದೆ. ಮೇಲ್ಚಾವಣಿ ಕುಸಿದು ಬೀಳುತ್ತಿದ್ದಂತೆ 21 ಮಕ್ಕಳು ಹೊರಗಡೆ ಓಡಿ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.