ತುಮಕೂರು : ಸಾಲಭಾದೇ ತಾಳಲಾರದೆ ವ್ಯಕ್ತಿಯೊಬ್ಬರು ಮರಕ್ಕೆ ನೇಣು ತೆಗೆದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಹಿರೇಹಳ್ಳಿ ಬಳಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಹಿರೇಹಳ್ಳಿ ಗ್ರಾಮದ ರವೀಂದ್ರ (52) ಎಂದು ತಿಳಿದುಬಂದಿದೆ. ರವೀಂದ್ರ ಅವರು, ಯಲಹಂಕ ಬಳಿ ಹೆಂಡತಿ ಮಕ್ಕಳೊಂದಿಗೆ ವಾಸವಿದ್ದರು. ಕಳೆದ ನಾಲ್ಕೈದು ದಿನಗಳಿಂದ ಮನೆಬಿಟ್ಟು ನಾಪತ್ತೆಯಾಗಿದ್ದು, ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರನ್ನೂ ದಾಖಲಿಸಲಾಗಿತ್ತು.
ಇಂದು ಬೆಳ್ಳಂಬೆಳಗ್ಗೆ ಹಿರೇಹಳ್ಳಿಯ ಜಮೀನೊಂದರ ಬಳಿ ಹುಣಸೇಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ರವೀಂದ್ರ ಅವರ ಶವ ಪತ್ತೆಯಾಗಿದೆ. ತನ್ನ ಹುಟ್ಟೂರಿನ ಮನೆ ಮುಂದೆ ಇದ್ದ ಹುಣಸೇಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಲಬಾಧೆಯೇ ಇದಕ್ಕೆ ಕಾರಣ ಎಂದು ಶಂಕಿಸಲಾಗಿದೆ.