ಅಹಮದಾಬಾದ್:ಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಮತ್ತು ಗುಜರಾತ್ನ ಮಾಜಿ ಡಿಜಿಪಿ ಆರ್.ಬಿ.ಶ್ರೀಕುಮಾರ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಅಹ್ಮದಾಬಾದ್ನ ಮೆಟ್ರೋಪಾಲಿಟನ್ ನ್ಯಾಯಾಲಯ ಕಳುಹಿಸಿದೆ.

2002ರ ಗುಜರಾತ್ ದಂಗೆಗಳ ಬಗ್ಗೆ ಪೊಲೀಸರಿಗೆ ಆಧಾರರಹಿತ ಮಾಹಿತಿ ನೀಡಿದ ತೀಸ್ತಾ ಸೆಟಲ್ವಾಡ್ ಅವರನ್ನು ಗುಜರಾತ್ ಅಪರಾಧ ವಿಭಾಗದ ಪೊಲೀಸರು ಕಳೆದ ಭಾನುವಾರ ಬಂಧಿಸಿದ್ದಾರೆ . “ಪೊಲೀಸರು ಆರೋಪಿಗಳಾದ ತೀಸ್ತಾ ಸೆಟಲ್ವಾಡ್ ಮತ್ತು ಆರ್ಬಿ ಶ್ರೀಕುಮಾರ್ ಅವರನ್ನು ಹೆಚ್ಚಿನ ಕಸ್ಟಡಿಗೆ ಕೇಳದಹಿನ್ನಲೆಯಲ್ಲಿ, ಮೆಟ್ರೋಪಾಲಿಟನ್ ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ” ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಅಮಿತ್ ಪಟೇಲ್ ಹೇಳಿದ್ದಾರೆ.

2002ರ ಗುಜರಾತ್ ದಂಗೆಗಳ ಬಗ್ಗೆ ತೀಸ್ತಾ ಸೆಟಲ್ವಾಡ್ ನೇತೃತ್ವದ ಎನ್ಜಿಒ ಪೊಲೀಸರಿಗೆ ಆಧಾರರಹಿತ ಮಾಹಿತಿಯನ್ನು ನೀಡಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ  ನೀಡಿದ ಸಂದರ್ಶನದಲ್ಲಿ ಹೇಳಿದ ನಂತರ ಈ ಬಂಧನಗಳು ನಡೆದಿವೆ.
.

Share.
Exit mobile version