ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಿರುವ ವಿಚಾರದ ಕುರಿತಂತೆ ಇದೀಗ ರೇಣುಕಾಸ್ವಾಮಿ ಹತ್ಯೆ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಮನವಿ ಸಲ್ಲಿಕೆಯಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಸೇರಿ ರೇಣುಕಾಸ್ವಾಮಿ ಹತ್ಯೆ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಜೈಲಿನ ಹಿರಿಯ ಅಧಿಕಾರಿಗಳಿಗೆ ಪೊಲೀಸರು ಮನವಿ ಮಾಡಿದ್ದಾರೆ. ಜೈಲು ಡಿಜಿಪಿ ಆದೇಶದ ಬಳಿಕ ರೇಣುಕಾಸ್ವಾಮಿ ಆರೋಪಿಗಳನ್ನು ಬೇರೆಗೆ ಜೈಲಿಗೆ ಶಿಫ್ಟ್ ಮಾಡಲು ಸಿದ್ಧತೆ ನಡೆಸಲಾಗಿದೆ.
ವಿಲ್ಸನ್ ಗಾರ್ಡನ್ ನಾಗ ಹಾಗೂ ನಟ ದರ್ಶನ್, ರೇಣುಕಾಸ್ವಾಮಿ ಹತ್ಯೆ ಆರೋಪಿಗನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲು ಈಗಾಗಲೇ ಜೈಲಿನ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ನಟ ದರ್ಶನ್ ರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡುವ ಕುರಿತಂತೆ ಈಗಾಗಲೇ ಜೈಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದು, ಕೋರ್ಟ್ ಅನುಮತಿಗಾಗಿ ಕಾಯುತ್ತಿದ್ದಾರೆ. ಕೋರ್ಟ್ ಅನುಮತಿ ಕೊಟ್ಟರೆ ಡಿ ಗ್ಯಾಂಗ್ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಆಗಲಿದೆ ಎಂದು ಹೇಳಲಾಗಿದೆ.
ನಟ ದರ್ಶನ್ ಸೇರಿ ಹಲವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡುವ ಸಂಬಂಧ ಅಧಿಕೃತ ಆದೇಶಕ್ಕೆ ಜೈಲು ಅಧಿಕಾರಿಗಳು ಕಾಯುತ್ತಿದ್ದಾರೆ. ಈಗಾಗಲೇ ಹಿಂಡಲಗಾ ಜೈಲಿನಲ್ಲಿ ಅಂದೇರಿ ಸೆಲ್ ಗುರುತಿಸಿದ್ದಾರೆ ಎಂದು ಹೇಳಲಾಗಿದೆ.
ನಟೋರಿಯಸ್ ಕೈದಿಗಳನ್ನು ಇಡಲು 36 ಕತ್ತಲು ಕೋಣೆಯ ವ್ಯವಸ್ಥೆ ಬೆಳಗಾವಿ ಜೈಲಿನಲ್ಲಿದೆ. ಅದರಲ್ಲಿ 15 ಕೋಣೆಗಳು ಖಾಲಿ ಇದೆ. ಹೀಗಾಗಿ ಬೆಳಗಾವಿ ಹಿಂಡಲಗಾ ಜೈಲಿನ ಬಂದೋಬಸ್ತ್ ವ್ಯವಸ್ಥೆ ಕುರಿತು ಹಿರಿಯ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ.