ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾರಾವ್ ಗೆ ಜೈಲೇ ಗತಿ ಆಗಿದ್ದು, ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.
ಹೈಕೋರ್ಟ್ ಏಕಸದಸ್ಯ ಪೀಠ ಆರೋಪಿ ರನ್ಯಾರಾವ್ ಹಾಗೂ ಎ2 ಆರೋಪಿ ತರುಣ್ ರಾವ್ ಜಾಮೀನು ಅರ್ಜಿ ವಜಾಗೊಳಿಸಿದೆ. ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆ ರನ್ಯಾರಾವ್ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. 64ನೇ ಸೆಷನ್ಸ್ ಕೋರ್ಟ್ ನಟಿ ಬೇಲ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ ಹಿನ್ನೆಲೆ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು..ರನ್ಯಾ ರಾವ್ ಬಳಿ ಒಟ್ಟು 14.8 ಕೆಜಿ ಚಿನ್ನ ಸಿಕ್ಕಿರುವ ಮಾಹಿತಿ ಇದ್ದು ರಾಜ್ಯದ ಇತಿಹಾಸದಲ್ಲಿ ಅತಿ ದೊಡ್ಡ ಚಿನ್ನದ ಅಕ್ರಮ ಸಾಗಣೆ ಪ್ರಕರಣ ಎನ್ನಲಾಗಿದೆ.
ಚಿನ್ನ ಕಳ್ಳಸಾಗಣೆ ಆರೋಪ ಪ್ರಕರಣದಲ್ಲಿ ಮಾರ್ಚ್ 3ರಂದು ರಾತ್ರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ಅವರನ್ನು ಬಂಧಿಸಿ, 14 ಕೆ.ಜಿ. ಚಿನ್ನವನ್ನು ಡಿಆರ್ಐ ಅಧಿಕಾರಿಗಳು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ವಹಿಸಿದ್ದರು.