ಉತ್ತರಪ್ರದೇಶ : ದೇಶಾದ್ಯಂತ ವಿಮಾನಗಳಿಗೆ ಬಾಂಬ್ ಬೆದರಿಕೆಯ ಮಧ್ಯ ನಿನ್ನೆ ಆಂಧ್ರಪ್ರದೇಶದ ತಿರುಪತಿಯ ಎರಡು ಪ್ರಮುಖ ಹೋಟೆಲ್ ಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದವು. ಇದೀಗ ಉತ್ತರ ಪ್ರದೇಶದ ಹಲವು ಪ್ರತಿಷ್ಠಿತ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ.
ಹೌದು ಆಂಧ್ರದ ಬಳಿಕ ಉತ್ತರ ಪ್ರದೇಶದ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿವೆ. ಲಖನೌನಲ್ಲಿರುವ ಫಾರ್ಚುನ್, ಲೆಮನ್ ಟ್ರೀ ಹಾಗೂ ಮ್ಯಾರೀಯೇಟ್ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಈಮೇಲ್ ಸಂದೇಶ ಬಂದಿದ್ದು ಹಲವು ಪ್ರತಿಷ್ಠಿತ ಹೋಟೆಲ್ ಗಳಿಗೆ ಬಾಂಬೆ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಲಾಗಿದೆ.
ಇನ್ನು ನಿನ್ನೆ ತಿರುಪತಿಯ ಹಲವು ಹೋಟೆಲ್ ಗಳಿಗೆ ಬೆದರಿಕೆ ಸಂದೇಶ ಬಂದಿದ್ದವು. ಮಾದಕವಸ್ತು ನಿಯಂತ್ರಣ ಬ್ಯೂರೋ ಮತ್ತು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಮಾದಕವಸ್ತು ಕಳ್ಳಸಾಗಣೆ ಜಾಲದ ಕಿಂಗ್ಪಿನ್ ಜಾಫರ್ ಸಾದಿಕ್ ಅವರನ್ನು ಬೆದರಿಕೆಯಲ್ಲಿ ಉಲ್ಲೇಖಿಸಲಾಗಿದೆ.ತಮಿಳುನಾಡಿನ ಉನ್ನತ ಪೊಲೀಸ್ ಅಧಿಕಾರಿ ಶಂಕರ್ ಜಿವಾಲ್ ಮತ್ತು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಪತ್ನಿ ಕಿರುತಿಗಾ ಉದಯನಿಧಿ ಅವರ ಹೆಸರನ್ನು ಇ-ಮೇಲ್ ನಲ್ಲಿ ಉಲ್ಲೇಖಿಸಲಾಗಿದೆ.