ಬೆಂಗಳೂರು : ರಾಜ್ಯದಲ್ಲಿ ಸಿಎಂ ಕುರ್ಚಿ ಫೈಟ್ ಮಧ್ಯೆ ಅಹಿಂದ ಸಮಾವೇಶಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಜನವರಿ 25 ರಂದು ಮೈಸೂರಿನಲ್ಲಿ ಅಹಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಘೋಷಣೆ ಮಾಡಿದೆ.
ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ಸಮುದಾಯಗಳು ನಿಂತಿದ್ದು, ಸಿದ್ದರಾಮಯ್ಯರನ್ನು ಬದಲಾಯಿಸದಂತೆ ಒತ್ತಡ ಹೇರಲು ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಅಹಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.
ಅಹಿಂದ ಸಮಾವೇಶಕ್ಕೆ ಮಹೂರ್ತಕ್ಕೆ ದಿನಾಂಕ ಫಿಕ್ಸ್ ಆಗಿದ್ದು ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತುಕೊಳ್ಳುವುದಕ್ಕೆ ಅಹಿಂದ ನಾಯಕರು ಮುಂದಾಗಿದ್ದಾರೆ. ಕುರ್ಚಿ ಕದನದ ನಡುವೆ ಸಿದ್ದರಾಮಯ್ಯ ಬೆಂಬಲಿಗರ ಹೊಸ ಅಸ್ತ್ರ ಪ್ರಯೋಗ ಮಾಡಲಿದ್ದು, ಜನವರಿ 25 ಕ್ಕೆ ಅಹಿಂದ ಸಮಾವೇಶ ನಡೆಲಿದೆ ಎನ್ನಲಾಗಿದೆ. ಇಂದು ಅಹಿಂದ ಸಮಾವೇಶ ನಡೆಸಲು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯಿಂದ ಸಿದ್ದತೆ ನಿಟ್ಟಿನಲ್ಲಿ ಪೂರ್ವಭಾವಿ ನಡೆಯಿತು, ಸಭೆಯಲ್ಲಿ ಎಲ್ಲರೂ ಕೂಡ ಜನವರಿ 25 ರಂದು ಅಹಿಂದ ಸಮಾವೇಶವನ್ನು ನಡೆಸುವುದಕ್ಕೆ ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಅಹಿಂದ ಸಮಾವೇಶಕ್ಕೆ ಸುಮಾರು 15 ರಿಂದ 20 ಸಾವಿರ ಜನರನ್ನು ಸೇರಿಸಲು ಇಂದಿನ ಸಭೆಯಲ್ಲಿ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಗೆ ಅಹಿಂದ ನಾಯಕರು ಹಾಗೂ ಸಿಎಂ ಸಿದ್ದರಾಮಯ್ಯ ನೇರ ಸಂದೇಶವನ್ನು ಕಳುಹಿಸುವುದಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.
ಇನ್ನೂ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡುವುದಿಲ್ಲ. ಅವರ ಪರವಾಗಿ ನಾವು ಸಮಾವೇಶ ಹಮ್ಮಿಕೊಂಡಿದ್ದೇವೆ ಅಂತ ಆಯೋಜಕರು ಹೇಳಿದ್ದಾರೆ.
ಇನ್ನೂ ಸಮಾವೇಶದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಶುಭ ಹಾರೈಸಿದ್ದಾರೆ. ಇದೇ ಈ ಬಗ್ಗೆ ಅವರು ದೆಹಲಿಯಲ್ಲಿ ಮಾತನಾಡಿದರು, ಇನ್ನೂ ದೆಹಲಿ ಭೇಟಿಗೆ ಸಂಬಂಧಪಟ್ಟಂತೆ ಅವರು ಮಾತನಾಡಿ ನಾನು ಯಾರನ್ನು ಭೇಟಿ ಮಾಡಿಲ್ಲ, ನಾನು ಯಾರಿಗೂ ತೊಂದರೆ ನೀಡುವುದಕ್ಕೆ ಬಯಸುವುದಿಲ್ಲ ಅಂತ ಹೇಳಿದರು. ಹೈಕಮಾಂಡ್ ನಮಗೆ ಫ್ರಿ ಹ್ಯಾಂಡ್ ಕೊಟ್ಟಿದೆ, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಅಂತ ಹೇಳಿದರು.






