ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ನಟ ಶ್ರೀನಗರ ಕಿಟ್ಟಿ ಹಾಗೂ ನಟಿ ರಚಿತಾ ರಾಮ್ ಅವರ ನಟನೆಯ ಸಂಜು ವೆಡ್ಸ್ ಗೀತಾ-2 ಸಿನಿಮಾ ರಿಲೀಸ್ ಆಗಿತ್ತು. ಆದರೆ ಈ ಒಂದು ಚಿತ್ರದ ಪ್ರಚಾರಕ್ಕೆ ರಚಿತಾ ರಾಮ್ ಅವರು ಪ್ರಚಾರಕ್ಕೆ ಬರಲಿಲ್ಲ ಎಂದು ಚಿತ್ರದ ನಿರ್ದೇಶಕ ಫಿಲಂ ಚೇಂಬರಿಗೆ ದೂರ ನೀಡಿದರು ಇದೀಗ ನಟಿ ರಚಿತಾ ರಾಮ್ ಚಿತ್ರವೊಂದರ ಅಡ್ವಾನ್ಸ್ ಹಣ ಪಡೆದು ವಾಪಸ್ ನೀಡದ ಹಿನ್ನೆಲೆ ಫಿಲಂ ಚೇಂಬರ್ ನಲ್ಲಿ ಮತ್ತೊಂದು ದೂರು ದಾಖಲಾಗಿದೆ.
ಹೌದು ಫಿಲಂ ಚೇಂಬರ್ ನಲ್ಲಿ ನಟಿ ರಚಿತಾ ರಾಮ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ‘ಉಪ್ಪಿ ರುಪ್ಪಿ’ ಸಿನೆಮಾಗಾಗಿ ನಟಿ ಅಡ್ವಾನ್ಸ್ ಪಡೆದಿದ್ದರು. ಹಣ ವಾಪಸ್ ನೀಡದ ಹಿನ್ನೆಲೆ ದೂರು ದಾಖಲಾಗಿದೆ. ಕಳೆದ 2 ತಿಂಗಳ ಹಿಂದೆಯೇ ದೂರು ದಾಖಲಾಗಿದೆ. 8 ವರ್ಷದ ಹಿಂದೆ ಉಪೇಂದ್ರ ರಚಿತಾ ನಟನೆಯಲ್ಲಿ ಈ ಒಂದು ಚಿತ್ರ ಮೂಡಿ ಬರಬೇಕಿತ್ತು. ಉಪ್ಪಿ ರಪ್ಪಿ ಚಿತ್ರದಲ್ಲಿ ಉಪೇಂದ್ರ ಜೊತೆಗೆ ನಟಿ ರಚಿತಾ ರಾಮ್ ನಟಿಸಲು ಒಪ್ಪಿಕೊಂಡಿದ್ದರು.
ವಿಜಯಲಕ್ಷ್ಮಿ ಅರಸ್ ನಿರ್ಮಾಣದ ಸಿನಿಮಾ ಕೆ ಮಾದೇಶ್ ಅವರು ನಿರ್ದೇಶಿಸಿದ್ದರು. 23 ಲಕ್ಷ ಸಂಭಾವನೆಗೆ ಒಪ್ಪಿಕೊಂಡು 13 ಲಕ್ಷ ಅಡ್ವಾನ್ಸ್ ಪಡೆದಿದ್ದರು. 2017ರಲ್ಲಿ ಬ್ಯಾಂಕ್ ಆಫ್ ನಲ್ಲಿ ಶೂಟಿಂಗ್ ಪ್ಲಾನ್ ಮಾಡಲಾಗಿತ್ತು. ಫ್ಲೈಟ್ ಟಿಕೆಟ್ ಬುಕಿಂಗ್ ಬಳಿಕ ರಚಿತಾ ರಾಮ್ ಚತ್ರಿಕರಣಕ್ಕೆ ಬರಲಿಲ್ಲ. ಚಿತ್ರೀಕರಣಕ್ಕೆ ಬರುವುದಾಗಿ ಹೇಳಿ 15 ದಿನಗಳ ಕಾಲ ನಟಿ ರಚಿತಾ ರಾಮ್ ಸತಾಯಿಸಿದ್ದರು. ನಿರ್ವಾಪಕಿ ಶೂಟಿಂಗ್ ರೂಮ್ ಬುಕ್ ಮಾಡಿಕೊಂಡು ಕಾದಿದ್ದರು.
ಆದರೆ ನಾಯಕ ನಟನ ಶೂಟಿಂಗ್ ಮಾಡಿಕೊಂಡು ಚಿತ್ರತಂಡ ವಾಪಸ್ ಆಗಿತ್ತು. ನಟಿ ರಚಿತಾ ರಾಮ್ ಅವರಿಂದ ನಿರ್ಮಾಪಕ ಒಂದುವರೆ ಕೋಟಿ ಹಣ ಕಳೆದುಕೊಂಡಿದ್ದಾರೆ. ಮೈಸೂರಿನಲ್ಲಿ ನಡೆದ ಶೂಟಿನಲ್ಲಿ ಕೇವಲ ಒಂದು ದಿನ ಮಾತ್ರ ರಚಿತಾ ರಾಮ್ ಭಾಗಿಯಾಗಿದ್ದರು ಸಿನಿಮಾ ಅರ್ಧಕ್ಕೆ ನಿಂತು ಹೋಗಿದೆ. ಅಂದಿನಿಂದ ರಚಿತಾ ರಾಮ್ ಅವರು ಸಂಪರ್ಕಕ್ಕೆ ಸಿಗದೇ ಸತಾಯಿಸಿದ್ದಾರೆ. ಕೊನೆಯದಾಗಿ ನಿರ್ಮಾಪಕಿ ಫಿಲಂ ಚೇಂಬರಿಗೆ ದೂರು ನೀಡಿದ್ದಾರೆ. ಈ ಕುರಿತು ಎರಡು ತಿಂಗಳ ಹಿಂದೆಯೇ ಫಿಲಂ ಚೇಂಬರ್ ನಲ್ಲಿ ದೂರು ದಾಖಲಾಗಿದೆ.