ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೆಶೋತ್ಸವ ಮೆರವಣಿಗೆಯಲ್ಲಿ ನಡೆದ ಗಲಭೆಗೆ ಸಂಬಧಿಸಿದಂತೆ ಮತ್ತೊಂದು ಸ್ಪೋಟಕ ಸಾಕ್ಷ್ಯ ಲಭ್ಯವಾಗಿದ್ದು, ಪಾತ್ರೆ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನಾಗಮಂಗಲದಲ್ಲಿ ಗಣೆಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆಯಲ್ಲಿ ಕಿಡಿಗೇಡಿಗಳ ಕೃತ್ಯ ಇದೀಗ ಬಯಲಾಗಿದ್ದು, ಕಿಡಿಗೇಡಿಗಳು ಸೆಪ್ಟೆಂಬರ್ 11 ರ ರಾತ್ರಿ 10.47 ಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಇನ್ನು ನಾಗಮಂಗಲ ಗಲಭೆ ಹಿಂದೆ ಬಾಂಗ್ಲಾದೇಶದ ವಲಸಿಗರ ಕೈವಾಡವಿದೆ. ನಾಗಮಂಗಲದಲ್ಲಿ ಬಾಂಗ್ಲಾ ವಲಸಿಗರು ಅಕ್ರಮವಾಗಿ ನೆಲೆಸಿದ್ದಾರೆ. ನಮ್ಮವರು ಯಾರೂ ಗಲಭೆಯಲ್ಲಿ ಭಾಗಿಯಾಗಿಲ್ಲ. ಪ್ರಕರಣವನ್ನು ಎನ್ ಐಎ ಗೆ ನೀಡಿದೆ ಸತ್ಯಾಂಶ ಹೊರಗೆ ಬರಲಿದೆ ಎಂದು ಸುರೇಶ್ ಗೌಡ ಗಂಭೀರ ಆರೋಪ ಮಾಡಿದ್ದಾರೆ.