ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ಆಗಿದ್ದು, ಕುಡಿದ ಅಮಲಿನಲ್ಲಿ ಸ್ನೇಹಿತರ ನಡುವೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾಗಿದೆ.
ಬೆಂಗಳೂರಿನ ಸೀಗೆಹಳ್ಳಿಯಲ್ಲಿ ಜಾರ್ಖಂಡ್ ನ ಪವನ್ (40) ಹತ್ಯೆ ಮಾಡಲಾಗಿದೆ. ಮದ್ಯ ಸೇವನೆ ವೇಳೆ ಮಾತಿಗೆ ಮಾತುಬೆಳೆದು ಗಣೇಶ್ ಎಂಬಾತ ಪವನ್ ನನ್ನು ಹತ್ಯೆ ಮಾಡಿದ್ದಾನೆ.
ಜಾರ್ಖಂಡ್ ಮೂಲದ ಪವನ್, ಗಣೇಶ್ ಕೂಲಿ ಮಾಡುತ್ತಿದ್ದರು. ಪವನ್ ಎದೆಗೆ ಚಾಕುವಿನಿಂದ ಇರಿದು ಗಣೇಶ್ ಕೊಲೆ ಮಾಡಿದ್ದಾನೆ. ಸದ್ಯ ಗಣೇಶ್ ನನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ.