ತುಮಕೂರು: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ತಾಲೂಕಿನ ನೆಲಹಾಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮೃತರೆಲ್ಲರೂ ಬೆಂಗಳೂರು ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ. ಗೋಕರ್ಣ, ಮುರುಡೇಶ್ವರ, ಉಡುಪಿ ಪ್ರವಾಸಕ್ಕೆ ಹೋಗಿ ಇಂದು ಬೆಂಗಳೂರಿಗೆ ವಾಪಸ್ ಆಗುವಾಗ ಅಪಘಾತ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
![’ಆಕೆಯೇನಕ್ಕೆ ಅಲ್ಲಿಗೆ ಬಂದಿದ್ದಾರೆ?’: ವಿಜಯ್ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಟಿ ತ್ರಿಶಾ ವಿರುದ್ಧ ನೆಟ್ಟಿಗರ ಆಕ್ರೋಶ! ದಳಪತಿ ವಿಜಯ್ ರಾಜಕೀಯ ಪ್ರವೇಶ - [Dalapathi Vijay Politics], ತ್ರಿಶಾ ಕೃಷ್ಣನ್ ತಿಳಿ ನೀಲಿ ಸೀರೆ - [Trisha Krishnan in Blue Saree], ತಮಿಳಗ ವೆಟ್ರಿ ಕಳಗಂ ಮುಖ್ಯಮಂತ್ರಿ - [TVK Chief Minister Vijay]](https://kannadanewsnow.com/kannada/wp-content/uploads/2026/05/ವಿಜಯ್-ಪ್ರಮಾಣವಚನ-ಕಾರ್ಯಕ್ರಮದಲ್ಲಿ-ತ್ರಿಶಾ-ಕೃಷ್ಣನ್-Trisha-Krishnan-at-Vijay-Swearing-in-Ceremony-300x169.jpg)







