Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರಿನ ಕಮೀಷನರ್ ಕಚೇರಿ ಆವರಣದಲ್ಲೇ ಹಣವಿದ್ದ ಬ್ಯಾಗ್ ಕದ್ದ ಪೊಲೀಸ್ ಸಿಬ್ಬಂದಿ ವಿರುದ್ಧವೇ FIR ದಾಖಲು

06/12/2025 9:57 PM

ಬೆಂಗಳೂರಲ್ಲಿ ಇ-ಖಾತಾ ವಿಲೇವಾರಿಗೆ ಪಾಸ್ ಪೋರ್ಟ್ ಕೇಂದ್ರಗಳ ಮಾದರಿಯಲ್ಲೇ ‘ಸೇವಾ ಕೇಂದ್ರ’ ಆರಂಭ: ತುಷಾರ್ ಗಿರಿನಾಥ್

06/12/2025 9:47 PM

BREAKING : ಚಿಕ್ಕಮಗಳೂರಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ : CM ಸಿದ್ದರಾಮಯ್ಯ ಹೇಳಿದ್ದೇನು?

06/12/2025 9:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಮುಡಾ’ ಬಳಿಕ ಮಂಡ್ಯದಲ್ಲೂ ಅಕ್ರಮ ಸೈಟ್ ಹಂಚಿಕೆ : ನಕಲಿ ಹಕ್ಕುಪತ್ರ ಸೃಷ್ಟಿಸಿ ಸಾವಿರಾರು ನಿವೇಶನಗಳ ಮಾರಾಟ!
KARNATAKA

BREAKING : ‘ಮುಡಾ’ ಬಳಿಕ ಮಂಡ್ಯದಲ್ಲೂ ಅಕ್ರಮ ಸೈಟ್ ಹಂಚಿಕೆ : ನಕಲಿ ಹಕ್ಕುಪತ್ರ ಸೃಷ್ಟಿಸಿ ಸಾವಿರಾರು ನಿವೇಶನಗಳ ಮಾರಾಟ!

By kannadanewsnow0515/11/2024 7:47 AM

ಮಂಡ್ಯ : ಈಗಾಗಲೇ ರಾಜ್ಯದಲ್ಲಿ ಮುಡಾ ಹಗರಣ ಭಾರಿ ಸದ್ದು ಮಾಡುತ್ತಿದ್ದು, ಹಗರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಇದೀಗ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಪುರಸಭೆ ಸೈಟ್ ಮಾರಾಟದಲ್ಲೂ ಕೂಡ ಭಾರೀ ಗೋಲ್ಮಾಲ್ ಆಗಿರುವ ಆರೋಪ ಕೇಳಿ ಬರುತ್ತಿದೆ.

ಹೌದು ಮಂಡ್ಯ ಜಿಲ್ಲೆಯ ಪಾಂಡವಪುರ ಪುರಸಭೆ ಸೈಟ್ಗಳ ಮಾರಾಟದಲ್ಲಿ ಭಾರಿ ಗೋಲ್ಮಾಲ್ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಆಶ್ರಯ ಯೋಜನೆ ಅಡಿ ಸೈಟ್ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ತಿಳಿದುಬಂದಿದೆ. ನಕಲಿ ಹಕ್ಕು ಪತ್ರಗಳನ್ನು ಸೃಷ್ಟಿ ಮಾಡಿ ಒಂದೇ ಸೈಟ್ ಹಲವರಿಗೆ ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಹಳ್ಳಿ ಜನರನ್ನು ಗುರಿಯಾಗಿರಿಸಿಕೊಂಡು ಇದೀಗ ಸಾವಿರಾರು ಸೈಟ್ಗಳನ್ನು ಮಾರಾಟ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪಾಂಡವಪುರ ಪುರಸಭೆಯಿಂದ ಹಲವು ವರ್ಷದಿಂದ ಸೈಟ್ ಹಂಚಿಕೆ ಮಾಡಲಾಗುತ್ತಿದೆ. ಆಶ್ರಯ ಯೋಜನೆ ಸಮಿತಿಯಿಂದ ನಿವೇಶನಗಳನ್ನು ಮಾರಾಟ ಮಾಡಲಾಗುತ್ತಿದೆ. ಒಂದೇ ಸೈಟ್ ಇಬ್ಬರಿಂದ ಮೂವರಿಗೆ ಮಾರಾಟ ಮಾಡಿ ವಂಚನೆ ಎಸಗಲಾಗಿದೆ. ಮೂಲ ಸೈಟ್ ದಾರರಿಗೆ ಮಾಹಿತಿ ಇಲ್ಲದೆ ನಿವೇಶನ ಮಾರಾಟ ಮಾಡಲಾಗಿದೆ.ಹಣ ನೀಡಿ ನಿವೇಶನ ಖರೀದಿಸಿದವರಿಗೂ ಕೂಡ ಇದೀಗ ಆತಂಕ ಹೆಚ್ಚಾಗಿದೆ. ದಂಧೆ ಕೋರರ ವಂಚನೆ ವಿಚಾರ ತಿಳಿದು ಶಾಸಕರೇ ಕಂಗಾಲಾಗಿದ್ದಾರೆ.

ಹಲವು ವರ್ಷಗಳಿಂದ ವಂಚಕರು ಸಾವಿರಾರು ಸೈಟ್ಗಳನ್ನು ಮಾರಿದ್ದಾರೆ. ಅಕ್ರಮದಲ್ಲಿ ಪುರಸಭೆಯ ಅಧಿಕಾರಿಗಳು ಜನಪ್ರತಿನಿಧಿಗಳು ಶಾಮಿಲಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ಪತ್ರ ಬರೆಯಲಾಗಿದೆ. ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಪತ್ರ ಬರೆದು ಮನವಿ ಮಾಡಿದ್ದಾರೆ. ಶಾಸಕರ ದೂರಿನ ಮೇರೆಗೆ ಸಿಐಡಿ ಅಕ್ರಮದ ಬಗ್ಗೆ ತನಿಖೆ ನಡೆಸುತ್ತಿದೆ. ಪಾಂಡವಪುರ ಪುರಸಭೆ ಸೈಟ್ ಹಂಚಿಕೆ ಗೋಲ್ಮಾಲ್ ಹಿನ್ನೆಲೆಯಲ್ಲಿ ಪುರಸಭೆಯಿಂದ ಏನ್ ಓ ಸಿ ಇದ್ದರೆ ಮಾತ್ರ ಸೈಟ್ ಸಬ್ ರಿಜಿಸ್ಟರ್ ಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೂಚನೆ ನೀಡಿದ್ದಾರೆ.

ಈಗಾಗಲೇ ಮುಡಾ ಹಗರಣದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ತೀವ್ರ ಮುಜುಗರಕ್ಕೆ ಈಡಾಗಿದೆ. ತನಿಖೆಯನ್ನು ಚುರುಕುಗೊಳಿಸಿರುವ ಇಡಿ ಅಧಿಕಾರಿಗಳು ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಹಾಗೂ ಮಲ್ಲಿಕಾರ್ಜುನ ಸ್ವಾಮಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡುವ ಸಾಧ್ಯತೆ ಇದೆ. ಇದರ ಮಧ್ಯ ಮಂಡ್ಯದ ಪಾಂಡವಪುರದ ಪುರಸಭೆಯಲ್ಲಿ ಅಕ್ರಮ ಸೈಟ್ಗಳ ಹಂಚಿಕೆಯು ರಾಜ್ಯ ಸರ್ಕಾರವನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಲಿದ್ದು, ವಿಪಕ್ಷಗಳಿಗೆ ಮತ್ತೊಂದು ಅಸ್ತ್ರ ಸಿಕ್ಕಿದಂತಾಗಿದೆ.

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಿನ ಕಮೀಷನರ್ ಕಚೇರಿ ಆವರಣದಲ್ಲೇ ಹಣವಿದ್ದ ಬ್ಯಾಗ್ ಕದ್ದ ಪೊಲೀಸ್ ಸಿಬ್ಬಂದಿ ವಿರುದ್ಧವೇ FIR ದಾಖಲು

06/12/2025 9:57 PM1 Min Read

ಬೆಂಗಳೂರಲ್ಲಿ ಇ-ಖಾತಾ ವಿಲೇವಾರಿಗೆ ಪಾಸ್ ಪೋರ್ಟ್ ಕೇಂದ್ರಗಳ ಮಾದರಿಯಲ್ಲೇ ‘ಸೇವಾ ಕೇಂದ್ರ’ ಆರಂಭ: ತುಷಾರ್ ಗಿರಿನಾಥ್

06/12/2025 9:47 PM5 Mins Read

BREAKING : ಚಿಕ್ಕಮಗಳೂರಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ : CM ಸಿದ್ದರಾಮಯ್ಯ ಹೇಳಿದ್ದೇನು?

06/12/2025 9:46 PM1 Min Read
Recent News

BREAKING: ಬೆಂಗಳೂರಿನ ಕಮೀಷನರ್ ಕಚೇರಿ ಆವರಣದಲ್ಲೇ ಹಣವಿದ್ದ ಬ್ಯಾಗ್ ಕದ್ದ ಪೊಲೀಸ್ ಸಿಬ್ಬಂದಿ ವಿರುದ್ಧವೇ FIR ದಾಖಲು

06/12/2025 9:57 PM

ಬೆಂಗಳೂರಲ್ಲಿ ಇ-ಖಾತಾ ವಿಲೇವಾರಿಗೆ ಪಾಸ್ ಪೋರ್ಟ್ ಕೇಂದ್ರಗಳ ಮಾದರಿಯಲ್ಲೇ ‘ಸೇವಾ ಕೇಂದ್ರ’ ಆರಂಭ: ತುಷಾರ್ ಗಿರಿನಾಥ್

06/12/2025 9:47 PM

BREAKING : ಚಿಕ್ಕಮಗಳೂರಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ : CM ಸಿದ್ದರಾಮಯ್ಯ ಹೇಳಿದ್ದೇನು?

06/12/2025 9:46 PM

ರೂಪಾಯಿ vs ಡಾಲರ್ : ರೂಪಾಯಿ ಕುಸಿತದ ಕುರಿತು ಸಚಿವೆ ‘ನಿರ್ಮಲಾ ಸೀತಾರಾಮನ್’ ಹೇಳಿದ್ದೇನು ಗೊತ್ತಾ.?

06/12/2025 9:44 PM
State News
KARNATAKA

BREAKING: ಬೆಂಗಳೂರಿನ ಕಮೀಷನರ್ ಕಚೇರಿ ಆವರಣದಲ್ಲೇ ಹಣವಿದ್ದ ಬ್ಯಾಗ್ ಕದ್ದ ಪೊಲೀಸ್ ಸಿಬ್ಬಂದಿ ವಿರುದ್ಧವೇ FIR ದಾಖಲು

By kannadanewsnow0906/12/2025 9:57 PM KARNATAKA 1 Min Read

ಬೆಂಗಳೂರು: ನಗರದ ಪೊಲೀಸ್ ಕಮೀಷನರ್ ಕಚೇರಿ ಆವರಣದಲ್ಲಿ ಹಣವಿದ್ದ ಬ್ಯಾಂಗ್ ಕಳವು ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸ್ ಸಿಬ್ಬಂದಿ ವಿರುದ್ಧವೇ…

ಬೆಂಗಳೂರಲ್ಲಿ ಇ-ಖಾತಾ ವಿಲೇವಾರಿಗೆ ಪಾಸ್ ಪೋರ್ಟ್ ಕೇಂದ್ರಗಳ ಮಾದರಿಯಲ್ಲೇ ‘ಸೇವಾ ಕೇಂದ್ರ’ ಆರಂಭ: ತುಷಾರ್ ಗಿರಿನಾಥ್

06/12/2025 9:47 PM

BREAKING : ಚಿಕ್ಕಮಗಳೂರಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ : CM ಸಿದ್ದರಾಮಯ್ಯ ಹೇಳಿದ್ದೇನು?

06/12/2025 9:46 PM

CRIME NEWS: ಹಣಕಾಸಿನ ವಿಚಾರಕ್ಕೆ ದೊಡ್ಡಪ್ಪನನ್ನೇ ಹತ್ಯೆಗೈದ ಪಾಪಿ ಪುತ್ರ

06/12/2025 8:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.