ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ಮುಸ್ಲಿಂ ಸಹೋದ್ಯೋಗಿ ಯುವತಿಗೆ ಬೈಕ್ ನಲ್ಲಿ ಡ್ರಾಪ್ ಕೊಟ್ಟಿದ್ದಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ.
ಕಲಬುರಗಿಯ ಸಂಘತ್ರಸವಾಡಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿರುವ ಸಾಯಿ ಮಂದಿರ ಬಡಾವಣೆಯ ನಿವಾಸಿ ಬೈಲಪ್ಪ ಖ್ಯಾಸ ಎಂಬುವರ ಮೇಲೆ ಹಲ್ಲೆ ಮಾಡಲಾಗಿದೆ.
ಒಂದೇ ಆಸ್ಪತ್ರೆಯಲ್ಲಿ ಬೈಲಪ್ಪ ಮತ್ತು ಯುವತಿ ಕೆಲಸ ಮಾಡುತ್ತಿದ್ದರು. ತುರ್ತು ಕಾರ್ಯದ ನಿಮಿತ್ತ ಡ್ರಾಪ್ ಮಾಡಿ ಎಂದು ಯುವತಿ ಹೇಳಿದ್ದರಿಂದ ಬೈಲಪ್ಪ ಡ್ರಾಪ್ ಕೊಟ್ಟಿದ್ದರು. ಈ ವೇಳೆ 20ಕ್ಕೂ ಹೆಚ್ಚು ಮುಸ್ಲಿಂ ಯುವಕರು ಯುವತಿಯನ್ನು ಬೈಕ್ ನಿಂದ ಇಳಿಸಿ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಸದ್ಯ ಗಾಯಾಳು ಬೈಲಪ್ಪ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಎಂ.ಬಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.