ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಮರ್ಡರ್ ಆಗಿದ್ದು, ಕಲಬುರಗಿಯಲ್ಲಿ ಚಾಕುವಿನಿಂದ ಇರಿದು ಪದವಿ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕಲಬುರಗಿ ನಗರದ ಹೊರವಲಯ ನಾಗನಹಳ್ಳಿ ಗ್ರಾಮದಲ್ಲಿ ಈ ಸುಮೀತ್ ಮಲ್ಲಾಬಾದ್ (19) ಹತ್ಯೆ ಮಾಡಲಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಸುಮೀತ್ ಕಳೆದ ನಾಲ್ಕೈದು ದಿನಗಳ ಹಿಂದೆ ತಾಯಿಯೊಂದಿಗೆ ಊರಿಗೆ ಬಂದಿದ್ದ. ಯುವತಿಯೊಬ್ಬಳ ಜೊತೆಗೆ ಸ್ನೇಹ ಹೊಂದಿದ್ದ ಸಮೀತ್ ಸಹೋದರ ಸಚಿನ್ ಮೇಲಿನ ದ್ವೇಷಕ್ಕೆ ಸಮೀತ್ ನನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.
ಯುವತಿ ಕುಟುಂಬಸ್ಥರು ಸಚಿನ್ ಸಹೋದರ ಸಮೀತ್ ನನ್ನು ಕೊಲೆ ಮಾಡಿ ಪರಾರಿಯಾಗಿದ್ದು, ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.