ಬೆಂಗಳೂರು : ಕಳೆದ ಜೂನ್ 4 ರಂದು ಚೊಚ್ಚಲ ಐಪಿಎಲ್ ಟ್ರೊಫಿ ಗೆದ್ದ ಹಿನ್ನಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಅಭಿನಂದನಾ ಸಮಾರಂಭ ಆಯೋಜನೆ ಮಾಡಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಕಾಲ್ತುಳಿತದಿಂದ 11 ಜನ ಸಾವನ್ನಪ್ಪಿದ್ದರು. ಇದೀಗ ಕೆಎಸ್ಸಿಎ ಹಾಗೂ ಆರ್ಸಿಬಿಗೆ ಕಬ್ಬನ್ ಪಾರ್ಕ್ ಅಸೋಸಿಯೇಷನ್ ಶಾಕ್ ನೀಡಿದೆ.
ಹೌದು RCB ಆಟಗಾರರನ್ನು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ನಲ್ಲಿ ಸರ್ಕಾರ ಸನ್ಮಾನಿಸಿತ್ತು. ಆರ್ಸಿಬಿ ಆಟಗಾರರನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು. ಅಭಿಮಾನಿಗಳು ವಿಧಾನಸೌಧದ ಪಕ್ಕದಲ್ಲಿ ಇದ್ದ ಕಬ್ಬನ್ ಪಾರ್ಕ್ನಲ್ಲಿನ ಮರಗಳ ಮೇಲೆ ಹತ್ತಿ ಆಟಗಾರರನ್ನು ನೋಡಲು ಮುಂದಾದರು. ಈ ವೇಳೆ ಅಭಿಮಾನಿಗಳ ಕಾಲ್ತುತುಳಿತದಿಂದ ಸಾಕಷ್ಟು ಸಸಿಗಳು ಹಾಳಾಗಿವೆ. ಇದರಿಂದ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ ಎಂದು ಕಬ್ಬನ್ ಪಾರ್ಕ್ ಅಸೋಸಿಯೇಷನ್ ಆರೋಪಿಸಿ, ಕೋರ್ಟ್ ಮೆಟ್ಟಿಲು ಏರಿದೆ.
ಕಬ್ಬನ್ ಪಾರ್ಕ್ನಲ್ಲಿದ್ದ ಸಸಿಗಳು, ಮರಗಳಿಗೆ ಮತ್ತು ಉದ್ಯಾನವನಕ್ಕೆ ಹಾನಿಯಾಗಿದೆ. ಹಾಗೇ ವಿಧಾನಸೌಧದ ಮುಂಭಾಗದ ಗಾರ್ಡನ್ನಲ್ಲೂ ಹಾನಿಯಾಗಿದೆ. ತೋಟಗಾರಿಕೆ ಇಲಾಖೆ ಕಬ್ಬನ್ ಪಾರ್ಕ್ನಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಲಾನ್ ಅಳವಡಿಸಿತ್ತು. ಈ ಲಾನ್ಗು ಕೂಡ ಕಾಲ್ತುತುಳಿತದಲ್ಲಿ ಹಾನಿಯಾಗಿದೆ.
ಇದೀಗ, ಕಾಲ್ತುತುಳಿತದಲ್ಲಿ ಪಾರ್ಕ್ಗೆ ಹಾನಿಯಾಗಿದ್ದು, ಈ ನಷ್ಟವನ್ನು ಆರ್ಸಿಬಿ ಹಾಗೂ ಕೆಎಸ್ಸಿಎ ಭರಿಸಿಕೊಡಬೇಕು ಅಂತ ಕಬ್ಬನ್ ಪಾರ್ಕ್ ಅಸೋಸಿಯೇಷನ್ ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಿದೆ. ಕಾಲ್ತುತುಳಿತದಲ್ಲಿ ಉಂಟಾದ ಸಂಪೂರ್ಣ ನಷ್ಟ ಭರಿಸುವಂತೆ ಕಬ್ಬನ್ ಪಾರ್ಕ್ ಅಸೋಸಿಯೇಷನ್ ಕೋರ್ಟ್ ಮೊರೆ ಹೋಗಿ ಒತ್ತಾಯ ಮಾಡಿದ್ದು, ಆರ್ಸಿಬಿ ಹಾಗೂ ಕೆಎಸ್ಸಿಎಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ.