ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಸೂಸೈಡ್ ಪ್ರಕರಣ ದಾಖಲಾಗಿದ್ದು, ಸಾಲಬಾಧೆಯಿಂದ ಬೇಸತ್ತು ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ನಾರಾಯಣಸ್ವಾಮಿ ಬೀದಿಯಲ್ಲಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾಗೇಶ್ (56) ಹಾಗೂ ಪತ್ನಿ ಸತ್ಯಲಕ್ಷ್ಮೀ (46) ನೇಣಿಗೆ ಶರಣಾದ ದಂಪತಿಗಳು.
ಕಳೆದ ಆರು ತಿಂಗಳಿನಿಂದ ಮೈಸೂರಿನಲ್ಲಿ ದಂಪತಿ ವಾಸವಾಗಿತ್ತು. ನಿನ್ನೆ ರಾತ್ರಿ ಕೊಳ್ಳೇಗಾಲಕ್ಕೆ ಬಂದು ನೇಣಿಗೆ ಶರಣಾಗಿದ್ದಾರೆ. ಕೊಳ್ಳೆಗಾಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.