ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ ಪ್ರಕರಣ ಬೆಳಕಿಗೆ ಬಂದಿದ್ದು, ಕಾರು ಖರೀದಿಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ, ಕಾರು ಚಾಲಕಾನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಮೃತನನ್ನು ಕಲಬುರ್ಗಿ ಮೂಲದ ದೇವರಾಜ್ (21) ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.ದೇವರಾಜ್ ಕಳೆದ ವರ್ಷ ಕಾರು ಖರೀದಿಸಿದ್ದರು ಮತ್ತು ಅದರ EMI ಪಾವತಿ ಮಾಡುವ ಉದ್ದೇಶದಿಂದ ಅದನ್ನು ಬಾಡಿಗೆಗೆ ನೀಡುವ ಯೋಜನೆ ಮಾಡಿಕೊಂಡಿದ್ದರು. ಆದರೆ ಇತ್ತೀಚಿನ ತಿಂಗಳುಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಬಾಡಿಗೆ ಸಿಗದೆ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದರು.
ಈ ವೇಳೆ ಬ್ಯಾಂಕ್ನಿಂದ ಎರಡು ತಿಂಗಳ EMI ಬಾಕಿಯಿದ್ದು, ನೋಟಿಸ್ ಕೂಡಾ ಬಂದಿದ್ದಲ್ಲದೆ, ಸಾಲದ ಒತ್ತಡದಿಂದ ದೇವರಾಜ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಚಿಕ್ಕಬಾಣಾವರದ ತಾವು ವಾಸ ಮಾಡುವ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.