ಮಂಗಳೂರು : ರಾಜ್ಯದಲ್ಲಿ ಮಹಾಮಳೆಗೆ ಬಾರಿ ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಗುಡ್ಡ ಕುಸಿದು ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಸಾವನ್ನಪ್ಪಿದ್ದಾರೆ. ಈ ಒಂದು ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಮಂಗಳೂರಿನಲ್ಲಿ ಮತ್ತೊಂದು ದುರಂತ ನಡೆದಿದ್ದು, ಮೀನುಗಾರಿಕೆಗೆ ಸಮುದ್ರಕ್ಕೆ ಇಳಿದಿದ್ದ ಇಬ್ಬರು ಮೀನುಗಾರರು ನೀರು ಪಾಲಾಗಿರುವ ಘಟನೆ ತೋಟಬೇಂಗ್ರೇ ಅಳಿವೇ ಬಾಗಿಲುವಿನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಹೌದು ಮಂಗಳೂರಿನಲ್ಲಿ ಮಳೆಗೆ ಮತ್ತೊಂದು ಭೀಕರ ದುರಂತ ಸಂಭವಿಸಿದ್ದು, ಸಮುದ್ರದಲ್ಲಿ ನಾಡ ದೋಣಿ ಮುಗುಚಿ ಇಬ್ಬರು ನೀರು ಪಾಲಾಗಿದ್ದಾರೆ. ಸಮುದ್ರದಲ್ಲಿ ಇಬ್ಬರು ಮೀನುಗಾರರು ಕೊಚ್ಚಿ ಹೋಗಿದ್ದಾರೆ. ತೋಟಬೇಂಗ್ರೇ ಅಳಿವೇ ಬಾಗಿಲುವಿನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಯಶವಂತ ಮತ್ತು ಕಮಲಾಕ್ಷ ಇಬ್ಬರೂ ಮೀನುಗಾರರು ನೀರುಪಾಲಾಗಿದ್ದಾರೆ.
ನಾಡ ದೋಣಿಯಲ್ಲಿ ಮೀನುಗಾರಿಕೆ ತೆರಳಿದ್ದಾಗ ಘಟನೆ ಸಂಭವಿಸಿದೆ. ಕಡಲಿನ ಅಲೆಯ ಅಬ್ಬರಕ್ಕೆ ನಾಡ ದೋಣಿ ಮುಗುಚಿದೆ. ಈ ವೇಳೆ ನಾಡ ದೋಣಿಯ ಅವಶೇಷಗಳು ಕಡಲ ತೀರದಲ್ಲಿ ಬಂದು ಬಿದ್ದಿವೆ. ಇದೀಗ ಇಬ್ಬರು ಮೀನುಗಾರರಿಗಾಗಿ ಶೋಧ ನಡೆಸಲಾಗುತ್ತಿದೆ. ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೂಡ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಸೂಚನೆ ನೀಡಿದ್ದರು. ಆದರೂ ಕೂಡ ಇವರು ಇಂದು ಮೀನುಗಾರಿಕೆಗೆ ತೆರಳಿದ್ದಾಗ ಈ ಒಂದು ದುರ್ಘಟನೆ ನಡೆದಿದೆ.