ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ಘೋರವಾದ ದುರಂತ ಒಂದು ಸಂಭವಿಸಿದ್ದು, ವಿದ್ಯುತ್ ತಂತಿ ತಗುಲಿ 11 ವರ್ಷದ ಬಾಲಕಿ ಸಾವನ್ನಪ್ಪಿದ ದಾರುಣ ಘಟನೆ ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಆನೇಕಲ್ ನ ನಾರಾಯಣಘಟ್ಟ ಮೂಲದ ತನಿಷ್ಕ ಎಂದು ಗುರುತಿಸಲಾಗಿದೆ.
ಸಂಪಂಗಿ ಮತ್ತು ಮಂಜುಳಾ ದಂಪತಿ ಪುತ್ರಿ ತನಿಷ್ಕ, ಇಲ್ಲಿನ ವಿಸ್ಮಯ ಶಾಲೆಯಲ್ಲಿ ಓದುತ್ತಿದ್ದಳು. ಇಂದು ಶಾಲೆ ರಜೆ ಇದ್ದ ಕಾರಣ ಬಾಲಕಿ ಮನೆಯಲ್ಲಿದ್ದಳು.ಮನೆ ಮುಂದೆ ಆಟ ಆಡುವಾಗ ವಿದ್ಯುತ್ ತಂತಿ ತಗಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಸೂರ್ಯ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.