ಮಂಡ್ಯ : ರಾಜ್ಯದಲ್ಲಿ ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿಯಾಗಿದ್ದು, ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ವಳಗೆರೆ ಮೆಣಸ ಗ್ರಾಮದಲ್ಲಿ ಯುವಕನೊಬ್ಬ ಖಾಸಗಿ ವ್ಯಕ್ತಿಗಳಿಂದ 30 ಲಕ್ಷ ರೂ. ಸಾಲ ಮಾಡಿದ್ದ ಎನ್ನಲಾಗಿದ್ದು, ಬಳಿಕ ಸಾಲಗಾರರ ಕಿರುಕುಳದಿಂದ ನೊಂದು ಇಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಮಾಡಲಾಗಿದೆ.
ವಳಗೆರೆ ಮೆಣಸ ಗ್ರಾಮದ ನವೀನ್ ಇಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.