ಹುಬ್ಬಳ್ಳಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಾಳಲಾರದೆ ಕಳೆದ ಕೆಲವು ತಿಂಗಳು ಹಿಂದೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆದಿದ್ದವು. ಬಳಿಕ ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡಿತ್ತು. ಆದರೂ ರಾಜ್ಯದಲ್ಲಿ ಆತ್ಮಹತ್ಯೆ ಘಟನೆಗಳು ನಿಲ್ಲುತ್ತಿಲ್ಲ. ಇದೀಗ, ಹುಬ್ಬಳ್ಳಿಯಲ್ಲಿ ಬಡ್ಡಿ ದಂಧೆಕೊರರ ಕಿರುಕುಳಕ್ಕೆ ವ್ಯಕ್ತಿ ಒಬ್ಬರು ಬಲಿಯಾಗಿದ್ದಾರೆ.
ಹೌದು ಹುಬ್ಬಳ್ಳಿಯ ಎಸ್ಎಂ ಕೃಷ್ಣ ನಗರದಲ್ಲಿ ಭಾಷಾ ಸಾಬ್ ಸಂಕೇಶ್ವರ (65) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ ಎಂದು ತಿಳಿದುಬಂದಿದೆ. ವಿಡಿಯೋ ಮಾಡಿಟ್ಟು ಭಾಷಾ ಸಾಬ್ ಸಂಕೇಶ್ವರ ನೇಣಿಗೆ ಶರಣಾಗಿದ್ದಾರೆ. ಕುಟುಂಬಸ್ಥರು ಸಂಬಂಧಿಕರ ಕಾರ್ಯಕ್ರಮಕ್ಕೆ ತೆರಳಿದ್ದಾಗ, ಮನೆಯಲ್ಲಿಯೇ ಭಾಷಾ ಸಾಬ್ ಸಂಕೇಶ್ವರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ಶರಣಾದ ಬಾಷಾಸಾಬ್ ಸಂಕೇಶ್ವರ್ ಅವರು, ಲಲಿತ, ಕಿಟ್ಯಾ, ವಿನೋದ್ ಬಂಕಾಪುರ್ ಹಾಗೂ ಅಶ್ಪಾಕ ನಿಂದ ಸಾಲ ಪಡೆದಿದ್ದರು. ಇವರೆಲ್ಲರೂ ಸಾಲ ಹಿಂತಿರುಗಿಸುವಂತೆ ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ.ಸಾಲ ನೀಡಿದ್ದವರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿಡಿಯೋ ಮಾಡಿದ್ದಾರೆ. ಮೊಬೈಲ್ ನಲ್ಲಿ ವಿಡಿಯೋ ಮಾಡಿಟ್ಟು ಭಾಷಾ ಸಾಬ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ಕುಡಿದಂತೆ ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.