ಮಂಗಳೂರು : ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ಬೆನ್ನಲ್ಲೇ ಕರ್ನಾಟಕ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಣಿಪ್ಪಾಡಿ ಅವರಿಗೆ ವಿದೇಶದಿಂದ ಬೆದರಿಕೆ ಕರೆ ಬಂದಿದೆ.
ಹೌದು, ವಿದೇಶದಿಂದ ತಮಗೆ ಬೆದರಿಕೆ ಕರೆ ಬರುತ್ತಿರುವುದಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ವಕ್ಫ್ ತಿದ್ದುಪಡಿ ಕಾಯ್ದೆ ಅಂಗಿಕಾರದ ಬೆನ್ನಲ್ಲೆ ವಿದೇಶದಿಂದ ಬೆದರಿಕೆ ಕರೆ ಬಂದಿದ್ದು, ನಿನ್ನ ಸಮುದಾಯ ನಿನ್ನ ಬಿಡಲ್ಲ ಎಂದು ಬೆದರಿಕೆ ಕೆರೆ ಬಂದಿದೆ. ಅನ್ವರ್ ಮಾಣಿಪ್ಪಾಡಿ ಪ್ರಸ್ತುತ ಮಂಗಳೂರಿನ ತಮ್ಮ ನಿವಾಸದಲ್ಲಿ ವಾಸವಾಗಿದ್ದು, ವಿದೇಶದಿಂದ ಅವರಿಗೆ ಬೆದರಿಕೆ ಕರೆ ಬರುತ್ತಿದೆ.








