ಬೆಂಗಳೂರು : ಅನುಕಂಪದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ನೀಡುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶವೊಂದನ್ನು ಹೊರಡಿಸಿದೆ.
ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವಾಗಲೇ ನಿಧನ ಹೊಂದಿದ ನೌಕರರ ಅವಲಂಬಿತರಿಗೆ ಉಲ್ಲೇಖ(1)ರ ನಿಯಮಗಳಡಿಯಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿ ನೀಡುವ ಸಲುವಾಗಿ ಅನುಬಂಧ-1 ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ಉಲ್ಲೇಖ(2)ರ ಆದೇಶದ ಪ್ರಕಾರ ಸಮಾಲೋಚನೆಯನ್ನು ದಿನಾಂಕ: 21.02.2025 ಬೆಳಗ್ಗೆ 10.00 ಘಂಟೆಗೆ ರಾಜ್ಯ ಆರೋಗ್ಯ ಮತ್ತು ಕುಟುಂಬಕಲ್ಯಾಣ ತರಬೇತಿಕೇಂದ್ರ, ಕುಷ್ಠರೋಗ ಆಸ್ಪತ್ರೆ ಆವರಣ, ಮಾಗಡಿ ರಸ್ತೆ, ಬೆಂಗಳೂರು-23, ಇಲ್ಲಿ ನಿಗದಿಪಡಿಸಲಾಗಿದ್ದು, ಎಲ್ಲಾ ಅಭ್ಯರ್ಥಿಗಳು ತಪ್ಪದೆ ಹಾಜರಾಗಲು ಸೂಚಿಸಿದೆ.
ಸೂಚನೆ:-
ಸಮಾಲೋಚನೆಯಲ್ಲಿ ಅಭ್ಯರ್ಥಿಯು ಸ್ವ-ಇಚ್ಛೆಯಿಂದ ಸ್ಥಳ ಆಯ್ಕೆ ಮಾಡಿಕೊಂಡ ನಂತರ ಮತ್ತೆ ಸ್ಥಳ ಬದಲಾವಣೆಗೆ ಅವಕಾಶವಿರುವುದಿಲ್ಲ.
ಸಮಾಲೋಚನೆಗೆ ಗೈರುಹಾಜರಾದ ಅಭ್ಯರ್ಥಿಗಳಿಗೆ ಸು-ಮೋಟೋ(ssu-moto)ಆಧಾರದ ಮೇಲೆ ಸ್ಥಳನಿಯುಕ್ತಿಗೊಳಿಸಲಾಗುವುದು.
ಸಮಾಲೋಚನೆಗೆ ಹಾಜರಾದ ಸಂದರ್ಭದಲ್ಲಿ ಮೊಬೈಲ್ ಬಳಕೆಯನ್ನು ನಿರ್ಬಂಧಿಸಿದೆ. ಯಾವುದೇ ದೂರವಾಣಿ ಕರೆಯನ್ನು ಮಾಡುವುದು ಹಾಗೂ ಗಣ್ಯವ್ಯಕ್ತಿಗಳ ಒತ್ತಡ ತರುವುದು ಕಂಡುಬÀದಲ್ಲಿ ಅಂತಹ ಅಭ್ಯರ್ಥಿಯ ವಿರುದ್ಧ ತಕ್ಷಣ ಜಾರಿಗೆ ಬರುವಂತೆ ಕ್ರಮ ಜರುಗಿಸಿ ನೇಮಕಾತಿ ರದ್ದು ಪಡಿಸಲಾಗುವುದು.
ಅಭ್ಯರ್ಥಿಗಳು ಗುರುತಿಗಾಗಿ ಆಧಾರಕಾರ್ಡ್/ಚುನಾವಣಾ ಗುರುತಿನ ಚೀಟಿ/ಪಾಸ್ಪೋರ್ಟ್/ ವಾಹನಚಾಲನ ಪರವಾನಗಿ ಇವುಗಳಲ್ಲಿ ಯಾವುದಾದರೂ ಒಂದನ್ನು ಕಡ್ಡಾಯವಾಗಿ ಸಮಾಲೋಚನೆ ಸಮಯದಲ್ಲಿ ಹಾಜರುಪಡಿಸತಕ್ಕದ್ದು.