ಕೋಲಾರ : ಹಿಂದೂ ಕೋಲಾರದಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು, ತರಬೇತಿ ನಿಮಿತ್ಯ ಹಾರಾಟ ನಡೆಸುತ್ತಿದ್ದ ಸೇನಾ ಹೆಲಿಕ್ಯಾಪ್ಟರ್ ಒಂದು ತಾಂತ್ರಿಕ ದೋಷ ಕಂಡುಬಂದಿದ್ದರಿಂದ ತುರ್ತಾಗಿ ಭೂಸ್ಪರ್ಶ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಡಿಕೆ ಹಳ್ಳಿ ಎಂಬಲ್ಲಿ ನಡೆದಿದೆ.
ಹೌದು ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಹೆಲಿಕ್ಯಾಪ್ಟರ್ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಡಿಕೆ ಹಳ್ಳಿಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಡಿಕೆ ಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಗ್ರಾಮದ ಕರೆ ಅಂಗಳದಲ್ಲಿ ಹೆಲಿಕಾಪ್ಟರ್ ತುರ್ತು ಸ್ಪರ್ಶ ಮಾಡಿದೆ. ಹೆಲಿಕ್ಯಾಪ್ಟರ್ ನಲ್ಲಿ ಇದ್ದ ಅಧಿಕಾರಿಗಳು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ತರಬೇತಿ ನಿಮಿತ್ಯ ಕೆಜಿಫ್ ಹಾಗೂ ಬಂಗಾರಪೇಟೆಯಲ್ಲಿ ಸೇನಾ ಹೆಲಿಕಾಪ್ಟರ್ ಹಾರಾಟ ನಡೆಸಲಾಗುತ್ತಿತ್ತು.