ಧಾರವಾಡ : ಧಾರವಾಡದಲ್ಲಿ ಹಿಟ್ ಅಂಡ್ ರನ್ ಗೆ ASI ಅಧಿಕಾರಿಯೊಬ್ಬರು ಬಲಿಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದಿಂದ ಹುಬ್ಬಳ್ಳಿಗೆ ಬೈಕ್ ನಲ್ಲಿ ತೆರಳುವಾಗ ಈ ಒಂದು ಘಟನೆ ನಡೆದಿದ್ದು ಸ್ಥಳದಲ್ಲೇ ASI ಎಲ್ಲಪ್ಪ ಕುಂಬಾರ್ ಸಾವನಪ್ಪಿದ್ದಾರೆ.
ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಬೈಕಿನಲ್ಲಿ ತೆರಳುವಾಗ ಅಪಘಾತ ಸಂಭವಿಸಿದೆ. ಪರಿಣಾಮ ಪೊಲೀಸ್ ಅಧಿಕಾರಿಯ ತಲೆಗೆ ತೀವೃವಾದ ಪೆಟ್ಟು ಬಿದ್ದಿದೆ. ತೀವೃ ರಕ್ತಸ್ರಾವದಿಂದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ವಿಷಯ ತಿಳಿದು ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ.
ಮೇಲ್ನೋಟಕ್ಕೆಇದು ಹಿಟ್ ಆಂಡ್ ರನ್ ಪ್ರಕರಣವಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್ ಅವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ,ಪರಿಶೀಲನೆ ನಡೆಸಿದ್ದಾರೆ.