ಬಳ್ಳಾರಿ : ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಭರ್ಜರಿ ಜಯಗಳಿಸಿದೆ.ಈ ಹಿನ್ನೆಲೆಯಲ್ಲಿ ಇಂದು ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಮಾರಂಭಕ್ಕೆ ಬಂದಿರುವ ಜನರಿಗೆ ಕಾಂಗ್ರೆಸ್ ಮುಖಂಡರು 200 ರೂಪಾಯಿ ಹಂಚಿರುವ ಆರೋಪ ಇದೀಗ ಕೇಳಿಬರುತ್ತಿದೆ.
ಹೌದು ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅನ್ನಪೂರ್ಣ ಇ ತುಕಾರಾಂ ಅವರು, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರ ವಿರುದ್ಧ ಭಾರಿ ಜಯ ಗಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಂಡೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು ಈ ಒಂದು ಸಮಾರಂಭದಲ್ಲಿ, ಸಮಾವೇಶಕ್ಕೆ ಬಂದಿದ್ದವರಿಗೆ ಕಾಂಗ್ರೆಸ್ ಮುಖಂಡರು 200 ರೂಪಾಯಿ ಹಂಚಿದ ಆರೋಪ ಕೇಳಿಬಂದಿದೆ.
ಸಂಡೂರಿನ ಅಭಿನಂದನಾ ಸಮಾವೇಶದ ವೇದಿಕೆ ಎಡಭಾಗದಲ್ಲಿ ಸಮಾವೇಶಕ್ಕೆ ಬಂದಿದ್ದವರಿಗೆ ಹಣ ಹಂಚಿಕೆ ಮಾಡಲಾಗಿದೆ. ವೇದಿಕೆಯಿಂದ ಸಿಎಂ ಸಿದ್ದರಾಮಯ್ಯ ಅವರು ನಿರ್ಗಮಿಸುತ್ತಿದ್ದಂತೆ ಹಣ ಹಂಚಿದ್ದಾರೆ. ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆಯಲ್ಲಿ ಸಂಡೂರಿನಲ್ಲಿ ಅಭಿನಂದನ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಮಾವೇಶಕ್ಕೆ ಬಂದಿದ್ದವರಿಗೆ ಸಿಎಂ ಸಿದ್ದರಾಮಯ್ಯ ನಿರ್ಗಮಿಸಿದ ಕೂಡಲೇ 200 ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ ಎನ್ನಲಾಗುತ್ತಿದೆ.