ವಿಜಯಪುರ : ವಿಜಯಪುರದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು, ಹಾಡಹಗಲೇ ಬ್ಲೇಡ್ ನಿಂದ ಕತ್ತಿಗೆ ಹೊಡೆದು ಆಟೋ ಚಾಲಕನ ಹತ್ಯೆಗೆ ಯತ್ನಿಸಲಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಅಂಬರೀಶ ಕೂಡಗಿ ಹಲ್ಲೆಗೆ ಒಳಗಾದ ಆಟೋ ಚಾಲಕ ಎಂದು ತಿಳಿದುಬಂದಿದೆ.
ಅಂಬರೀಷ್ ಆಟೋ ಏರಿದ್ದ ಅಪರಿಚಿತ ವ್ಯಕ್ತಿ ಒಬ್ಬ ಅಂಬರೀಶ್ ಹತ್ಯೆಗೆ ಯತ್ನಿಸಿದ್ದಾನೆ. ಆಟೋ ಚಾಲನೆ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಬ್ಲೇಡ್ ಯಿಂದ ಕತ್ತಿಗೆ ಹೊಡೆದು ಅಪರಿಚಿತ ವ್ಯಕ್ತಿ ಸ್ಥಳದಿಂದ ಪರಾರಿ ಯಾಗಿರುವ ಘಟನೆ ವರದಿಯಾಗಿದೆ. ಕೂಡಲೆ ಗಾಯಾಳು ಅಂಬರೀಶ್ ನನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.