Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಹೊಸ ವರ್ಷಾಚರಣೆ ಹಿನ್ನೆಲೆ ಇಂದು ರಾತ್ರಿ 11 ಗಂಟೆಯಿಂದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ
KARNATAKA

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಹೊಸ ವರ್ಷಾಚರಣೆ ಹಿನ್ನೆಲೆ ಇಂದು ರಾತ್ರಿ 11 ಗಂಟೆಯಿಂದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

By kannadanewsnow5731/12/2025 5:50 AM

ಬೆಂಗಳೂರು : ಹೊಸ ವರ್ಷಾಚರಣೆ ಅಂಗವಾಗಿ ಬೆಂಗಳೂರು ನಗರ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದು, ನಗರದ ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ.

ಡಿಸೆಂಬರ್ 31ರ ರಾತ್ರಿ 11ರಿಂದ ಜನವರಿ 1ರ ಬೆಳಿಗ್ಗೆ 6ರವರೆಗೆ ನಗರದ ಹಲವು ಮೇಲ್ಸೇತುವೆಗಳಲ್ಲಿ (ವಿಮಾನ ನಿಲ್ದಾಣ ಸಂಪರ್ಕಿಸುವ ಮೇಲ್ಸೇತುವೆ ಹೊರತುಪಡಿಸಿ) ಎಲ್ಲ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ಅವಧಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ಮೇಲ್ಸೇತುವೆಯಲ್ಲೂ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ನೈಸ್ ರಸ್ತೆಯಲ್ಲಿ ರಾತ್ರಿ 8ರಿಂದಲೇ ದ್ವಿಚಕ್ರ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ರಾತ್ರಿ 10 ಗಂಟೆಯ ನಂತರ ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣ ಬಂದ್‌ ಆಗಲಿದೆ. ಟ್ರಿನಿಟಿ ಅಥವಾ ಕಬ್ಬನ್‌ ಪಾರ್ಕ್‌ ಮೆಟ್ರೊ ನಿಲ್ದಾಣಗಳಿಗೆ ತೆರಳಿ ಪ್ರಯಾಣಿಕರು ಸಂಚಾರ ಮಾಡಬಹುದು.

ಸಂಭ್ರಮಾಚರಣೆಯ ಪ್ರಮುಖ ಸ್ಥಳವಾಗಿರುವ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಡಿಸೆಂಬರ್ 31ರ ರಾತ್ರಿ 8ರಿಂದ ತಡರಾತ್ರಿ 2 ಗಂಟೆವರೆಗೆ ಸಾರ್ವಜನಿಕ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿ ವೃತ್ತದವರೆಗೆ, ಬ್ರಿಗೇಡ್ ರಸ್ತೆಯಲ್ಲಿ ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಅಪೇರಾ ಜಂಕ್ಷನ್‌ವರೆಗೆ, ಚರ್ಚ್ ಸ್ಟ್ರೀಟ್ನ ಬ್ರಿಗೇಡ್ ರಸ್ತೆ ಜಂಕ್ಷನ್ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್‌ವರೆಗೆ, ರೆಸಿಡೆನ್ಸಿ ರಸ್ತೆಯ ಆಶೀರ್ವಾದಮ್ ಜಂಕ್ಷನ್‌ನಿಂದ ಮೆಯೊ ಹಾಲ್ ಜಂಕ್ಷನ್‌ವರೆಗೆ, ಎಂ.ಜಿ. ರಸ್ತೆ ಜಂಕ್ಷನ್‌ನಿಂದ ಎಸ್‌ಬಿಐ ವೃತ್ತದವರೆಗೆ ಸಂಚಾರ ವ್ಯವಸ್ಥೆ ನಿಷೇಧಿಸಲಾಗಿದೆ.

ಬೆಂಗಳೂರಿನ ಶಿವಾಜಿನಗರ ಬಿಎಂಟಿಸಿ ಶಾಪಿಂಗ್‌ ಕಾಂಪ್ಲೆಕ್ಸ್ 1ನೇ ಮಹಡಿ, ಯುಬಿ ಸಿಟಿ, ಗರುಡಾ ಮಾಲ್, ಕಾಮರಾಜ್ ರಸ್ತೆಯಲ್ಲಿ (ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್‌ವರೆಗೆ) ಸಾರ್ವಜನಿಕರಿಗೆ ವಾಹನಗಳ ನಿಲುಗಡೆ ಅವಕಾಶ ಇದೆ.

ಮುನಿರೆಡ್ಡಿ ಕಲ್ಯಾಣ ಮಂಟಪದ ಎದುರುಗಡೆಯ ಬಿಬಿಎಂಪಿ ಮೈದಾನ, ಬೆಥನಿ ಶಾಲಾ ಪಕ್ಕದ ಬಿಬಿಎಂಪಿ ಮೈದಾನ, 60 ಅಡಿ ಮಾದರಿ ರಸ್ತೆ ಎಡಭಾಗದಲ್ಲಿ (ಮುನಿರೆಡ್ಡಿ ಕಲ್ಯಾಣ ಮಂಟಪದಿಂದ ಕೆನರಾ ಬ್ಯಾಂಕ್‌ ಜಂಕ್ಷನ್‌ವರೆಗೆ) ವಾಹನಗಳನ್ನು ನಿಲ್ಲಿಸಲು ಅನುಮತಿ ನೀಡಲಾಗಿದೆ.

ಹೊಸ ವರ್ಷಾಚರಣೆ ಅಂಗವಾಗಿ ಬೆಂಗಳೂರು ನಗರ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದು, ನಗರದ ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ.

ಡಿಸೆಂಬರ್ 31ರ ರಾತ್ರಿ 11ರಿಂದ ಜನವರಿ 1ರ ಬೆಳಿಗ್ಗೆ 6ರವರೆಗೆ ನಗರದ ಹಲವು ಮೇಲ್ಸೇತುವೆಗಳಲ್ಲಿ (ವಿಮಾನ ನಿಲ್ದಾಣ ಸಂಪರ್ಕಿಸುವ ಮೇಲ್ಸೇತುವೆ ಹೊರತುಪಡಿಸಿ) ಎಲ್ಲ ಮಾದರಿಯ ವಾಹನಗಳ… pic.twitter.com/PZHxUy5LIK

— DIPR Karnataka (@KarnatakaVarthe) December 30, 2025

ಸಂಭ್ರಮಾಚರಣೆಯ ಪ್ರಮುಖ ಸ್ಥಳವಾಗಿರುವ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಡಿಸೆಂಬರ್ 31ರ ರಾತ್ರಿ 8ರಿಂದ ತಡರಾತ್ರಿ 2 ಗಂಟೆವರೆಗೆ ಸಾರ್ವಜನಿಕ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿ ವೃತ್ತದವರೆಗೆ, ಬ್ರಿಗೇಡ್ ರಸ್ತೆಯಲ್ಲಿ ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಅಪೇರಾ ಜಂಕ್ಷನ್… pic.twitter.com/LgQhfNw1GE

— DIPR Karnataka (@KarnatakaVarthe) December 30, 2025

ಬೆಂಗಳೂರಿನ ಶಿವಾಜಿನಗರ ಬಿಎಂಟಿಸಿ ಶಾಪಿಂಗ್‌ ಕಾಂಪ್ಲೆಕ್ಸ್ 1ನೇ ಮಹಡಿ, ಯುಬಿ ಸಿಟಿ, ಗರುಡಾ ಮಾಲ್, ಕಾಮರಾಜ್ ರಸ್ತೆಯಲ್ಲಿ (ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್‌ವರೆಗೆ) ಸಾರ್ವಜನಿಕರಿಗೆ ವಾಹನಗಳ ನಿಲುಗಡೆ ಅವಕಾಶ ಇದೆ.

ಮುನಿರೆಡ್ಡಿ ಕಲ್ಯಾಣ ಮಂಟಪದ ಎದುರುಗಡೆಯ ಬಿಬಿಎಂಪಿ ಮೈದಾನ, ಬೆಥನಿ ಶಾಲಾ ಪಕ್ಕದ ಬಿಬಿಎಂಪಿ… pic.twitter.com/7VXPWBIZpE

— DIPR Karnataka (@KarnatakaVarthe) December 30, 2025

ಹೊಸ ವರ್ಷಾಚರಣೆಯ ವೇಳೆ ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ#NewYear2026 pic.twitter.com/QDAsMpt7Kt

— DIPR Karnataka (@KarnatakaVarthe) December 30, 2025

ಹೊಸ ವರ್ಷಾಚರಣೆಯ ವೇಳೆ ಬಿಎಂಟಿಸಿ ಬಸ್‌ಗಳು​ ಹಾಗೂ ಟಿ.ಟಿ. ವಾಹನಗಳು ಸಂಚರಿಸುವ ಮಾರ್ಗಗಳು:#NewYear2026 pic.twitter.com/yHjxfUnCw8

— DIPR Karnataka (@KarnatakaVarthe) December 30, 2025

BREAKING: Attention Bengaluru motorists: Traffic restrictions on these roads from 11 pm tonight due to New Year celebrations
Share. Facebook Twitter LinkedIn WhatsApp Email

Related Posts

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

16/02/2026 9:19 PM1 Min Read

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM1 Min Read

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM1 Min Read
Recent News

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM

ನಿಮ್ಗೆ ಗೊತ್ತಾ.? ‘ಎಂ.ಎಸ್ ಧೋನಿ’ಗೆ ಪ್ರತಿ ತಿಂಗಳು 70,000 ರೂ. ಪಿಂಚಣಿ ; ‘BCCI’ ನೀಡುವ ನಿವೃತ್ತಿ ಸೌಲಭ್ಯಗಳಿವು.!

16/02/2026 9:42 PM
State News
KARNATAKA

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

By kannadanewsnow0916/02/2026 9:19 PM KARNATAKA 1 Min Read

ಬೆಂಗಳೂರು: ನಂದಿನಿ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ತಯಾರಿಸಲಾಗುತ್ತಿದೆ. ಸಾಮಾಜಿಕ…

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ತಪ್ಪದೇ ಹೀಗೆ ಮಾಡಿ, ನಿಮ್ಮ ಸಮಸ್ಯೆಗಳೆಲ್ಲ ದೂರ ಗ್ಯಾರಂಟಿ

16/02/2026 8:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.