ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣದಲ್ಲಿ ಜೂನ್ 22 ರಂದು ಸಂಚಾರದಲ್ಲಿ ವ್ಯತ್ಯಯ ಇರಲಿದೆ. ಭಾನುವಾರ ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಇರಲಿದ್ದು, ಎಂ. ಜಿ ರಸ್ತೆಯಿಂದ ಬೈಯಪ್ಪನಹಳ್ಳಿ ನಡುವಿನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಜೂನ್ 22 ರಂದು ಟ್ರಿನಿಟಿ ಸರ್ಕಲ್, ಹಲಸೂರು ನಡುವೆ ನಿರ್ವಹಣಾ ಕಾಮಗಾರಿ ಹಿನ್ನಲೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಆಗಲಿದೆ. ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಮೆಟ್ರೋ ಸಂಚಾರ ಇರುವುದಿಲ್ಲ ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸಂಚಾರ ಇರುವುದಿಲ್ಲ.ಆದರೆ ಬೈಯಪ್ಪನಹಳ್ಳಿಯಿಂದ ಕಾಡುಗೋಡಿಯವರೆಗೂ ಮೆಟ್ರೋ ಸಂಚಾರ ಇರುತ್ತದೆ.
ಅಲ್ಲದೇ ಚಲಘಟ್ಟದಿಂದ ಎಂ. ಜಿ ರಸ್ತೆ ಅವರಿಗೆ ಎಂದಿನಂತೆ ಮೆಟ್ರೋ ಸಂಚಾರ ಇರಲಿದೆ. ಆದರೆ ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿಯ ನಡುವೆ ಮಾತ್ರ ಸಂಚಾರ ಇರುವುದಿಲ್ಲ. ಹಸಿರು ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ಸಂಚಾರ ಇರಲಿದೆ ಎಂದು ಬಿಎಂಆರ್ಸಿಎಲ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.