ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ಆಕಸ್ಮಿಕವಾಗಿ ಅಗ್ನಿ ಅವಘಡಗಳು ಆಗಾಗ ಸಂಭವಿಸುತ್ತದೆ ಇದೀಗ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿದೆ. ಈ ವೇಳೆ ಮನೆಯಲ್ಲಿದ್ದ ಆರು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ.
ಹೌದು ಅಡುಗೆ ಅನಿಲ ಸೋರಿಕೆಯಾಗಿ ಮನೆಯಲ್ಲಿದ್ದ 6 ಜನರಿಗೆ ಗಾಯಗಳಾಗಿರುವ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊಂದಿಕೊಂಡಿದೆ. ಮನೇಲಿದ್ದ ಮಕ್ಕಳು ಸೇರಿ 6 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಎಲ್ಲಾ ಗಾಯಾಳುಗಳಿಗೆ ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.