BREAKING : ಬೆಂಗಳೂರಲ್ಲಿ ವಕೀಲೆ ಎಸ್.ಜೀವಾ ಆತ್ಮಹತ್ಯೆ ಕೇಸ್ : ಪ್ರಕರಣವನ್ನು’CCB’ ತನಿಖೆಗೆ ವಹಿಸಿ ಆದೇಶ!
ಬೆಂಗಳೂರು : ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಭ್ರಷ್ಟಾಚಾರದ ಹಗರಣದ ತನಿಖೆಯನ್ನು ಎದುರಿಸಿದ್ದ ವಕೀಲೆ ಎಸ್ ಜೀವಾ (34) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹೆಚ್ಚಿನ ತನಿಖೆಗಾಗಿ ಈ ಒಂದು ಪ್ರಕರಣವನ್ನು ಸಿಸಿಬಿಗೆ ವಹಿಸಿ ಬೆಂಗಳೂರು ಕಮಿಷನರ್ ಬಿ.ದಯಾನಂದ ಆದೇಶಿಸಿದ್ದಾರೆ. ಭೋವಿ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಮೆಟಿರಿಯಲ್ಸ್ ಪೂರೈಸುತ್ತಿದ್ದ ಜೀವಾ ಎಂಬುವವರು ಆತ್ಮಹತ್ಯೆಗೆ ಶರಣಾದ ಘಟನೆ ನವೆಂಬರ್ 22ರಂದು ನಡೆದಿತ್ತು. ಬನಶಂಕರಿ ಠಾಣೆ ವ್ಯಾಪ್ತಿಯ ರಾಘವೇಂದ್ರ ಲೇಔಟಿನಲ್ಲಿರುವ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಜೀವಾ ಆತ್ಮಹತ್ಯೆಗೆ ಶರಣಾಗಿದ್ದರು. … Continue reading BREAKING : ಬೆಂಗಳೂರಲ್ಲಿ ವಕೀಲೆ ಎಸ್.ಜೀವಾ ಆತ್ಮಹತ್ಯೆ ಕೇಸ್ : ಪ್ರಕರಣವನ್ನು’CCB’ ತನಿಖೆಗೆ ವಹಿಸಿ ಆದೇಶ!
Copy and paste this URL into your WordPress site to embed
Copy and paste this code into your site to embed