ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಕೊಲೆಯಾಗಿದ್ದು, ಯುವಕನನ್ನು ಕೊಂದ ಬಳಿಕ ಶವಕ್ಕೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಂಗಳೂರು ನಗರ ಆನೇಕಲ್ ತಾಲೂಕಿನ ಶೀಲಿಂದ್ರದೊಡ್ಡಿ ಎಂಬಲ್ಲಿ ನಡೆದಿದೆ.
ಶಿಲೀಂದ್ರದೊಡ್ಡಿ ಬಳಿ ಸುಮಾರು 25 ವರ್ಷದ ಯುವಕನ ಶವ ಪತ್ತೆಯಾಗಿದ್ದು, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಶಿಲೀಂದ್ರದೊಡ್ಡಿ ಬಳಿ ಯುವಕನನ್ನು ಕೊಲೆಗೈದು ಬಳಿಕ ಬೆಂಕಿ ಹಚ್ಚಿ ಹಂತಕರು ಪರಾರಿ ಆಗಿದ್ದಾರೆ.ಮೃತದೇಹ ಪತ್ತೆಯಾದ ಸಮೀಪ ಟಿವಿಎಸ್ ಎನ್ ಕೋರ್ಟ್ ಕಾರ್ಟ್ ಬೈಕ್ ಸಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.