ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಕೊಲೆ ಆಗಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿ ಉದ್ಯಮಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬಿಜಿಎಸ್ ಲೇಔಟ್ನ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ.ಕೊಲೆಯಾದ ಉದ್ಯಮಿಯನ್ನು ಲೋಕನಾಥ್ ಸಿಂಗ್ (37) ಎಂದು ತಿಳಿದುಬಂದಿದೆ.
ಈ ತಿಂಗಳಲ್ಲಿ ಕೊಲೆಯಾದ ಲೋಕನಾಥ್ ಸಿಂಗ್ ಗೆ ಮದುವೆ ನಿಶ್ಚಯವಾಗಿತ್ತು. ಆದರೆ ಇದೀಗ ದುಷ್ಕರ್ಮಿಗಳ ಕೈಯಿಂದ ಬರ್ಬರವಾಗಿ ಕೊಲೆಯಾಗಿದ್ದು, ಕೊಲೆಯಾದ ಬಳಿಕ ಲೋಕನಾಥ್ ಗನ್ಮ್ಯಾನ್ ನಾಪತ್ತೆಯಾಗಿದ್ದ. ನಂತರ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷನಾಗಿದ್ದಾನೆ. ಸದ್ಯ ಪೊಲೀಸರು ಈತನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.