ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಸ್ಟೇಡಿಯಂನ ಇಬ್ಬರು ಸಿಬ್ಬಂದಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನ ಟಿಕೆಟ್ ಕೌಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ಮೂವರು ಆಯೋಜಕರನ್ನು ಬಂಧಿಸಿದ್ದಾರೆ.
ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ , ಕಿರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಮೂರು ಸಂಸ್ಥೆಗಳ ಪ್ರತಿನಿಧಿಸುವ ವ್ಯಕ್ತಿಗಳ ಬಂಧಿಸುವಂತೆ ಸೂಚನೆ ನೀಡಿದ್ದಾರೆ. ಇವರ ಮೇಲೆ ಎಫ್ ಐಆರ್ ರಿಜಿಸ್ಟರ್ ಆಗಿದೆ.