ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಪತ್ನಿಯ ಕಾಟಕ್ಕೆ ಮನನೊಂದು ಟೆಕ್ಕಿ ಅತುಲ್ ಸುಭಾಷ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನಲ್ಲಿ ಪತ್ನಿ ಹಾಗೂ ಮಾವನ ಕಾಟಕ್ಕೆ ಬೇಸತ್ತು ಹೆಡ್ ಕಾನ್ಸ್ಟೇಬಲ್ ಒಬ್ಬರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ನಡೆದಿದೆ.
ಹೌದು ಪತ್ನಿ ಕಾಟಕ್ಕೆ ಬೆಂಗಳೂರಿನಲ್ಲಿ ಕಾನ್ಸ್ಟೇಬಲ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಯಪ್ಪನಹಳ್ಳಿಯಲ್ಲಿ ರೈಲಿಗೆ ತಲೆಕೊಟ್ಟು ತಿಪ್ಪಣ್ಣ ಎನ್ನುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಳಿಮಾವು ಠಾಣೆಯ ಹೆಡ್ ಕಾನ್ಸ್ಟೇಬಲ್ ಅಲ್ಲಿ ತಿಪ್ಪಣ್ಣ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ಹಾಗೂ ಮಾವನ ಕಿರುಕುಳದ ಬಗ್ಗೆ ಡೆತ್ ನೋಟ್ ಅಲ್ಲಿ ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಮೂರು ವರ್ಷಗಳ ಹಿಂದೆ ತಿಪ್ಪಣ್ಣ ಅವರು ಮದುವೆಯಾಗಿದ್ದರು.ಒಂದು ವರ್ಷದ ವರೆಗೆ ಎಲ್ಲವೂ ಚೆನ್ನಾಗಿತ್ತು. ಆದರೆ ಒಂದು ವರ್ಷದ ಬಳಿಕ ಸಂಸಾರದಲ್ಲಿ ವೈಮನಸ್ಸು, ಕಲಹ ಉಂಟಾಗಿದೆ. ಅಲ್ಲದೆ ಪತ್ನಿಯ ಅಪ್ಪ ಅಂದರೆ ಮಾವ ಯಮುನಪ್ಪ ಎನ್ನುವವರು ಕೂಡ ಮಾನಸಿಕವಾಗಿ ಹಿಂಸೆ ನೀಡಿದ್ದು, ಅಶ್ಲೀಲವಾಗಿ ಬೈದು ಕಿರುಕುಳ ನೀಡಿದ್ದಾರೆ. ಮಾವ ಯಮನಪ್ಪ ಜೀವ ಬೆದರಿಕೆ ಹಾಕಿರುವ ಬಗ್ಗೆ ಡೆತ್ ನೋಟ್ ಅಲ್ಲಿ ತಿಪ್ಪಣ್ಣ ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ರೈಲ್ವೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.