ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಡೆತ್‌ ನೋಟ್‌ ಬರೆದಿಟ್ಟು ಕೆರೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 

ಬೆಂಗಲೂರಿನ ಅಂಜಾನಪುರದ ತುಳಸಿಪುರದ ಕೆರೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಶ್ರೀಕಾಂತ್‌ (೨೪) ಹಾಗೂ ಅಂಜನಾ (೨೦)  ಎಂದು ಗುರುತಿಸಲಾಗಿದೆ. ಶ್ರೀಕಾಂತ್‌ ಬಿಕಾಂ ಓದುತ್ತಿದ್ದು, ಅಂಜನಾ ಬಿಬಿಎ ಓದುತ್ತಿದ್ದಳು, ಇಬ್ಬರು ನಾಪತ್ತೆಯಾಗಿರುವ ಬಗ್ಗೆ ಮಿಸ್ಸಿಂಗ್‌ ಕೇಸ್‌ ದಾಖಲಾಗಿತ್ತು.

ನಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಪ್ರೇಮಿಗಳು ಡೆತ್‌ ನೋಟ್‌ ಬರೆದಿಟ್ಟು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಸಂಜೆ ಇಬ್ಬರ ಶವಗಳು ಪತ್ತೆಯಾಗಿದ್ದು, ತಲಘಟ್ಟಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share.
Exit mobile version