ಬೆಂಗಳೂರು : ಶಿವರಾತ್ರಿ ಎಂದೆ ಬೆಂಗಳೂರಿನಲ್ಲಿ ಘೋರವದಂತಹ ಘಟನೆ ನಡೆದಿದ್ದು ಪತಿ-ಪತ್ನಿ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಪತಿಯೊಬ್ಬ ತಮ್ಮ 6 ವರ್ಷದ ಮಗಳ ಎದುರಲ್ಲೇ ಪತ್ನಿಯನ್ನು ಕೊಂದು, ಬಳಿಕ ಮನನೊಂದು ತಾನು ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ತಿಗಳರಪಾಳ್ಯದ ಮುಬಾರಕ್ ನಗರದಲ್ಲಿ ನಡೆದಿದೆ.
ಮೃತರನ್ನು ಸುರೇಶ್ (40) ಹಾಗೂ ಈತನ ಪತ್ನಿ ಮಮತಾ (33) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಸುರೇಶ್ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಆದರೆ ಇತ್ತೀಚಿಗೆ ಸರಿಯಾಗಿ ಕೆಲಸಕ್ಕೂ ಹೋಗುತ್ತಿರಲಿಲ್ಲ ಇದರಿಂದ ಸುರೇಶ ಹಾಗೂ ಪತ್ನಿ ಮಮತಾ ನಡುವೆ ಆದಾಗ ಗಲಾಟೆ ನಡೆಯುತ್ತಿತ್ತು.
ಇದೇ ವಿಚಾರವಾಗಿ ಇಂದು ಶಿವರಾತ್ರಿ ಹಬ್ಬದ ದಿನದಂದು ಪತಿ ಪತ್ನಿ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಸುರೇಶ್ ಕೋಪದಲ್ಲಿ ಪತ್ನಿ ಮಮತಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಬಳಿಕ ನೊಂದು ತಾನು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.