ಬೆಂಗಳೂರು : ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ಆಕೆಯ ಶೀಲವನ್ನು ಶಂಕಿಸಿದ ಪತಿಯೊಬ್ಬ ಪತ್ನಿಯ ಕತ್ತು ಹಿಸುಕಿ ಭೀಕರವಾಗಿ ಕೊಲೆ ಮಾಡಿ, ಬಳಿಕ ಆಕೆಯ ಶವವನ್ನು ಕೆರೆಗೆ ಎಸೆದಿರುವ ಘೋರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪ ತಮ್ಮರಸನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ತಮ್ಮರಸನಹಳ್ಳಿಯಲ್ಲಿ ವಿಜಯಪುರ ಮೂಲದ ರಾಬಿನಾಳನ್ನು (32) ಬರ್ಬರವಾಗಿ ಹತ್ಯೆಗೈಯಲಾಗಿದೆ ಪತ್ನಿಯ ಅನೈತಿಕ ಸಂಬಂಧದಿಂದ ಬೆಸತ್ತು ಕೊಲೆ ಮಾಡಿದ್ದಾಗಿ ಪತಿ5 ನಿಜಮುದ್ದೀನ್ ಹೇಳಿಕೆ ನೀಡಿದ್ದಾನೆ.
ಅನೈತಿಕ ಸಂಬಂಧ ಶಂಕಿಸಿ ಪತ್ನಿಯನ್ನು ನಿಜಮುದ್ದಿನ ಭೀಕರವಾಗಿ ಕೊಲೆ ಮಾಡಿದ್ದಾನೆ. ಕತ್ತುಹಿಸಿಕಿ ಪತ್ನಿ ಕೊಂದು ಶವವನ್ನು ಕೆರೆಗೆ ಎಸೆದಿದ್ದಾನೆ. ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದು ಅನೈತಿಕ ಸಂಬಂಧಕ್ಕೆ ಬೇಸತ್ತು ನಾನು ಪತ್ನಿಯನ್ನು ಕೊಲೆ ಮಾಡಿದ್ದಾಗಿ ತಪ್ಪೋಪ್ಪಿಕೊಂಡಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ನಿಜಾಮುದ್ದೀನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.