ಬೆಂಗಳೂರು : ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಿದ್ದರೂ ಅನೇಕರು ಆ ನಿಯಮವನ್ನು ಉಲ್ಲಂಘಿಸುತ್ತಿದ್ದಾರೆ. ಅದರಲ್ಲೂ ಹೆಲ್ಮೆಟ್ ಧರಿಸದ ಕಾರಣಕ್ಕೆ ಅನೇಕ ಮಕ್ಕಳು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆಗಳು ಕೂಡ ವರದಿಯಾಗಿವೆ.
ಈ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವ ಮಕ್ಕಳಿಗೆ ಕೂಡ ಹೆಲ್ಮೆಟ್ ಕಡ್ಡಾಯಗೊಳಿಸಿ ಬೆಂಗಳೂರು ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ.ದ್ವಿಚಕ್ರ ವಾಹನ ಚಲಾಯಿಸುವಾಗ ಅದರಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಬೆಂಗಳೂರು ಸಂಚಾರಿ ಪೊಲೀಸರು ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ.
ದಂಡ ಬಾಕಿ ಇದ್ದರೆ ಮನೆಗೆ ಪೋಲೀಸರ ಭೇಟಿ
ರಾಜಧಾನಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ರೂ.50 ಸಾವಿರಕ್ಕೂ ಅಧಿಕ ದಂಡ ಮೊತ್ತ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರ ಮನೆಗೆ ನಗರ ಸಂಚಾರ ಪೊಲೀಸರು ಭೇಟಿ ನೀಡಿ ಬಾಕಿ ದಂಡ ವಸೂಲಿಗೆ ಮುಂದಾಗಿದ್ದಾರೆ.
ನಗರದ ಎಲ್ಲಾ ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪರಿಶೀಲಿಸಿ, 50 ಸಾವಿರಕ್ಕೂ ಅಧಿಕ ದಂಡದ ಮೊತ್ತವನ್ನು ಬಾಕಿ ಉಳಿಸಿಕೊಂಡಿರುವ ವಾಹನಗಳ ಪಟ್ಟಿ ಮಾಡಲಾಗಿದೆ. ಸದ್ಯಕ್ಕೆ ನಗರದಲ್ಲಿ 2,681 ವಾಹನಗಳ ಮಾಲೀಕರು 50 ಸಾವಿರಕ್ಕೂ ಅಧಿಕ ದಂಡ ಬಾಕಿ ಉಳಿಸಿಕೊಂಡಿರುವುದು ಪತ್ತೆಯಾಗಿದೆ.
ಕಳೆದ 10 ದಿನಗಳಲ್ಲಿ 120 ಮಂದಿ ವಾಹನ ಮಾಲೀಕರ ವಿಳಾಸ ಪತ್ತೆಹಚ್ಚಿ ಬಾಕಿ ದಂಡ ವಸೂಲಿ ಮಾಡಲಾಗಿದೆ ಎಂದು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ತಿಳಿಸಿದರು. ಕೆಲ ವಾಹನ ಸವಾರರು ಬೇರೆ ವ್ಯಕ್ತಿಗ ಳಿಗೆ ವಾಹನಗಳನ್ನು ಮಾರಾಟ ಮಾಡಿ ದ್ದಾರೆ. ಅಂತವರಿಗೆ ಬಾಕಿ ದಂಡ ಪಾವತಿ ಸಲು ನೋಟಿಸ್ ನೀಡಿ ಕಾಲಾವಕಾಶ ನೀಡಲಾಗಿದೆ. ನೋಟಿಸ್ ನೀಡಿಯೂದಂಡ ಪಾವತಿಸದಿದ್ದಲ್ಲಿ ಅಂತಹ ವಾಹನ ಕರವಿರುದ್ಧ ನ್ಯಾಯಾಲಯಕ್ಕೆ ಮಾಲೀಕರ ವಿರುದ್ಧ ದೋಷಾರೋಪಪಟ್ಟಿ ವುದು. ಬಳಿಕ ನ್ಯಾಯಾಲಯದಲ್ಲಿ ವಿಚಾ . ರಣೆ ಎದುರಿಬೇಕಾಗುತ್ತದೆ ಎಂದು ಹೇಳಿದರು.