ಬೆಂಗಳೂರು : ಖಾಲಿ ಜಾಗದಲ್ಲಿ ಕಸವಿಟ್ಟಿದ್ದಕ್ಕೆ ಕಿರುತೆರೆ ನಟನೆಗೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಡಿ ಗ್ರೂಪ್ ಲೇಔಟ್ ನಲ್ಲಿ ಈ ಘಟನೆ ಸಂಭವಿಸಿದೆ. ಕಸದ ವಿಚಾರಕ್ಕೆ ಕಿರುತೆರೆ ನಟ ಚರಿತ್ ಬಾಳಪ್ಪ ಎಂಬುವರ ಮೇಲೆ ಹಲ್ಲೆ ನಡೆದಿದೆ.
ಲೋಕಸಭಾ ಚುನಾವಣೆ ವೇಳಾಪಟ್ಟಿ ವೈರಲ್: ಸ್ಪಷ್ಟನೆ ನೀಡಿದ ಚುನಾವಣಾ ಆಯೋಗ
ಪಕ್ಕದ ಮನೆಯಿಂದ ಚರಿತ್ ಬಾಳಪ್ಪ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ ಅನ್ನಪೂರ್ಣೇಶ್ವರಿ ನಗರದ ಡಿ ಗ್ರೂಪ್ ಲೇಔಟ್ ನಲ್ಲಿ ಈ ಘಟನೆ ಸಂಭವಿಸಿದೆ. ಫೆಬ್ರವರಿ 23ರಂದು ನಡೆದ ಘಟನೆ ತಡವಾಗಿ ಬಳಕೆಗೆ ಬಂದಿದೆ ಶೂಟಿಂಗ್ ಹೋಗುವಾಗ ಖಾಲಿ ಜಾಗದಲ್ಲಿ ಕಸವಿಟ್ಟಿದ್ದ ಎಂದು ಹೇಳಲಾಗುತ್ತಿದೆ.
‘ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ’ ಭೇಟಿ ನೀಡಿದ ಪ್ರಧಾನಿ :ಆನೆ ಮತ್ತು ಜೀಪ್ ಸಫಾರಿ ನಡೆಸಿದ ಪಿಎಂ ಮೋದಿ | Watch
ಈ ವೇಳೆ ಕಿರುತೆರೆ ನಟನನ್ನು ಅಪರಿಚಿತ ವ್ಯಕ್ತಿ ಪ್ರಶ್ನಿಸಿದ್ದಾನೆ. ನಂತರ ಇಬ್ಬರ ನಡುವೆ ತೀವ್ರ ವಾಗ್ವಾದ ಶುರುವಾಗಿ ಗಲಾಟೆ ನಡೆದಿದೆ.ಇದೇ ಸಂದರ್ಭದಲ್ಲಿ ಗಲಾಟೆ ವಿಕೋಪಕ್ಕೆ ಹೋಗಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ಗೈದಿರುವುದಾಗಿ ಆರೋಪ ಕೇಳಿ ಬಂದಿದೆ ಎಂದು ಹೇಳಲಾಗುತ್ತಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚರಿತ್ ಬಾಳಪ್ಪ ಮದ್ದು ಲಕ್ಷ್ಮಿ ಸಿರಿ ಹಲವು ಧಾರವಾಹಿಯಲ್ಲಿ ನಟಿಸಿದ್ದಾರೆ