Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ದೆಹಲಿ ಸ್ಪೋಟಕಕ್ಕೆ ಬಿಗ್ ಟ್ವಿಸ್ಟ್: 3ನೇ ಕಾರು ಪತ್ತೆ, ಇನ್ನೂ 32 ವಾಹನ ಭಾಗಿಯಾಗಿರುವ ಶಂಕೆ | Delhi Red Fort blast

13/11/2025 5:55 PM

‘ಚಿನ್ನ’ ನಿಮ್ಮನ್ನು ಶ್ರೀಮಂತರನ್ನಾಗಿ ಮಾಡಿದೆ! ಸರ್ಕಾರದ ಗೋಲ್ಡ್ ಬಾಂಡ್’ನಿಂದ ಶೇ. 321ರಷ್ಟು ಲಾಭ, ‘RBI’ ಅಂತಿಮ ಬೆಲೆ ಪ್ರಕಟ

13/11/2025 5:53 PM

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ ಹೀಗಿವೆ.!

13/11/2025 5:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘UPI ವ್ಯವಹಾರ’ ನಡೆಸಿದ ‘ಸಣ್ಣ ವ್ಯಾಪಾರಸ್ತ’ರಿಗೆ ಬಿಗ್ ಶಾಕ್: ಟ್ಯಾಕ್ಸ್ ಕಟ್ಟುವಂತೆ ‘ವಾಣಿಜ್ಯ ತೆರಿಗೆ ಇಲಾಖೆ’ ಖಡಕ್ ಸೂಚನೆ
KARNATAKA

BREAKING : ‘UPI ವ್ಯವಹಾರ’ ನಡೆಸಿದ ‘ಸಣ್ಣ ವ್ಯಾಪಾರಸ್ತ’ರಿಗೆ ಬಿಗ್ ಶಾಕ್: ಟ್ಯಾಕ್ಸ್ ಕಟ್ಟುವಂತೆ ‘ವಾಣಿಜ್ಯ ತೆರಿಗೆ ಇಲಾಖೆ’ ಖಡಕ್ ಸೂಚನೆ

By kannadanewsnow5712/07/2025 10:17 AM

ಬೆಂಗಳೂರು : ‘UPI ವ್ಯವಹಾರ’ ನಡೆಸಿದ ‘ಸಣ್ಣ ವ್ಯಾಪಾರಸ್ತ’ರಿಗೆ ವಾಣಿಜ್ಯ ತೆರಿಗೆ ಇಲಾಖೆಯು ಬಿಗ್ ಶಾಕ್ ನೀಡಿದ್ದು, ಟ್ಯಾಕ್ಸ್ ಕಟ್ಟುವಂತೆ ಖಡಕ್ ಸೂಚನೆ ನೀಡಿದೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ವಾಣಿಜ್ಯ ತೆರಿಗೆ ಇಲಾಖೆ, ಕರ್ನಾಟಕದ ಹಲವು ಟಿ.ವಿ. ಮತ್ತು ಪತ್ರಿಕಾ ಮಾಧ್ಯಮಗಳಲ್ಲಿ ಸಣ್ಣಪುಟ್ಟ ವರ್ತಕರಿಗೆ ವಾಣಿಜ್ಯ ತೆರಿಗೆ ಇಲಾಖೆಯು ನೀಡಿರುವ ನೋಟಿಸುಗಳ ಬಗ್ಗೆ ವರದಿಯಾಗಿರುತ್ತದೆ. ಈ ಬಗ್ಗೆ ವಾಣಿಜ್ಯ ತೆರಿಗೆ ಇಲಾಖೆಯು ಈ ಕೆಳಕಂಡ ಮಾಹಿತಿಯನ್ನು ನೀಡಿರುತ್ತದೆ.

ಜುಲೈ 1, 2017 ರಿಂದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯು ದೇಶಾದ್ಯಂತ ಜಾರಿಗೆ ಬಂದಿರುತ್ತದೆ. ಈ ಕಾಯ್ದೆಯ ಕಲಂ 22 ರನ್ವಯ ಸರಕು ಪೊರೈಕೆದಾರರ ಸಮಗ್ರ ವಹಿವಾಟು ಒಂದು ಹಣಕಾಸು ವರ್ಷದಲ್ಲಿ 40 ಲಕ್ಷ ರೂಪಾಯಿಗಳನ್ನು ಮೀರಿದರೆ ಅಥವಾ ಸೇವೆಗಳ ಪೊರೈಕೆದಾರರ ಸಮಗ್ರ ವಹಿವಾಟು ಒಂದು ಹಣಕಾಸು ವರ್ಷದಲ್ಲಿ 20 ಲಕ್ಷ ರೂಪಾಯಿಗಳನ್ನು ಮೀರಿದರೆ ಜಿ.ಎಸ್.ಟಿ ನೋಂದಣಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಈ ಸಮಗ್ರ ವಹಿವಾಟಿನಲ್ಲಿ (exempted & Taxable) ಸರಕು ಮತ್ತು ಸೇವೆಗಳು ಸೇರಿರುತ್ತದೆ. ಆದರೆ ತೆರಿಗೆ ಬಾಧ್ಯತೆಯು Taxable ಸರಕುಗಳು & ಸೇವೆಗಳಿಗೆ ಮಾತ್ರ ಅನ್ವಯವಾಗುತ್ತದೆ. ತೆರಿಗೆ ಬಾದ್ಯತೆಯು ಮಾರಾಟ ಮಾಡಿದ ಸರಕುಗಳ ಪ್ರಕಾರ ನಿರ್ದರಿಸಲ್ಪಡುತ್ತದೆ. (ಉದಾಹರಣೆಗೆ ಬ್ರೆಡ್ ಮಾರಾಟದ ಮೇಲೆ ತೆರಿಗೆ ಇರುವುದಿಲ್ಲ. ಕುರುಕುಲು ತಿಂಡಿಗಳ ಮೇಲೆ 5% ತೆರಿಗೆ ಬಾಧ್ಯತೆ ಇರುತ್ತದೆ).

ವಾಣಿಜ್ಯ ತೆರಿಗೆಗಳ ಇಲಾಖೆಯು ಏಕೀಕೃತ ಪಾವತಿ ವ್ಯವಸ್ಥೆ (ಯೂ.ಪಿ.ಐ) ಯ ಮೂಲಕ ವರ್ತಕರು 2021-22 ರಿಂದ 2024-25ರ ಸಾಲಿನಲ್ಲಿ ಸ್ವೀಕರಿಸಿರುವ ಹಣದ ವಿವರಗಳನ್ನು ವಿವಿಧ ಯೂ.ಪಿ.ಐ ಸೇವೆಗಳ ಪೂರೈಕೆದಾರರಿಂದ ಸಂಗ್ರಹಿಸಿರುತ್ತದೆ. ವರ್ತಕರು ಮಾರಾಟದ ಹಣವನ್ನು (ಯೂ.ಪಿ.ಐ) ಮಾತ್ರವಲ್ಲದೇ ನಗದು ಮತ್ತು ಇತರ ವಿಧಾನಗಳಲ್ಲಿ ಕೂಡ ಪಡೆಯುತ್ತಾರೆ. ಹಾಗಾಗಿ, ಯೂ.ಪಿ.ಐ ಮೂಲಕ 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದಿರುವ ವರ್ತಕರ ವಾರ್ಷಿಕ ವಹಿವಾಟು ಇನ್ನೂ ಗಣನೀಯವಾಗಿ ಹೆಚ್ಚಾಗಿರುತ್ತದೆ. ಸದರಿ ಮಾಹಿತಿಯನ್ನು ಪರಿಶೀಲಿಸಿ, 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದು ಸರಕು ಮತ್ತು ಸೇವಾ ತೆರಿಗೆ ಕಾಯ್ದೆ – 2017 ರಡಿಯಲ್ಲಿ ನೋಂದಣಿಯನ್ನು ಪಡೆಯದೆ. ತೆರಿಗೆ ಪಾವತಿಸದೆ ಇರುವ ವರ್ತಕರಿಗೆ ನೋಟೀಸನ್ನು ಜಾರಿಗೊಳಿಸಲಾಗಿರುತ್ತದೆ. ಈ ನೋಟಿಸುಗಳಿಗೆ, ವರ್ತಕರು ತಾವು ಮಾರಾಟ ಮಾಡಿದ ಸರಕು ಮತ್ತು ಸೇವೆಗಳ ವಿವರಗಳನ್ನು ನೀಡಿ ಸರಿಯಾದ ತೆರಿಗೆಯನ್ನು ಪಾವತಿಸಬೇಕಾಗಿರುತ್ತದೆ.

ಇಂತಹ ವರ್ತಕರು ತಕ್ಷಣ ನೋಂದಣಿ ಪಡೆಯಬೇಕಾಗಿರುತ್ತದೆ. ವಾರ್ಷಿಕ ವಹಿವಾಟು 1.5 ಕೋಟಿ ರೂಪಾಯಿಗಳಿಗಿಂತ ಕಡಿಮೆ ಇರುವ ಸಣ್ಣ ವರ್ತಕರು ರಾಜಿ ತೆರಿಗೆಯನ್ನು ಆಯ್ಕೆ ಮಾಡಿ. ಇನ್ನು ಮುಂದೆ 1% ತೆರಿಗೆ ಪಾವತಿಸಬಹುದಾಗಿರುತ್ತದೆ.ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯ ಮಾಹಿತಿಯನ್ನು ಇಲಾಖೆಯ ಜಾಲತಾಣhttps://gst.kar.nic.in/ ದಲ್ಲಿ ಪಡೆಯಬಹುದಾಗಿರುತ್ತದೆ ಎಂದು ಪ್ರಕಟಣೆ ಹೊರಡಿಸಿದೆ.

BREAKING: Big shock for 'small traders' who conducted 'UPI transactions': 'Commercial Tax Department' issues stern notice to pay tax
Share. Facebook Twitter LinkedIn WhatsApp Email

Related Posts

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ ಹೀಗಿವೆ.!

13/11/2025 5:46 PM2 Mins Read

BREAKING: ಚಿತ್ತಾಪುರದಲ್ಲಿ ‘RSS ಪಥಸಂಚಲನ’ಕ್ಕೆ ಸರ್ಕಾರ ಅನುಮತಿಸಿ ಅಧಿಕೃತ ಆದೇಶ

13/11/2025 5:37 PM3 Mins Read

‘ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆ ಮುಂದುವರೆಯಲು ಹಾದಿ ಸುಲಭ’; ಅಡ್ವೋಕೇಟ್ ಕೆ.ಜನೆರಲ್ ಶಶಿ ಕಿರಣ್ ಶೆಟ್ಟಿ

13/11/2025 5:01 PM1 Min Read
Recent News

BREAKING: ದೆಹಲಿ ಸ್ಪೋಟಕಕ್ಕೆ ಬಿಗ್ ಟ್ವಿಸ್ಟ್: 3ನೇ ಕಾರು ಪತ್ತೆ, ಇನ್ನೂ 32 ವಾಹನ ಭಾಗಿಯಾಗಿರುವ ಶಂಕೆ | Delhi Red Fort blast

13/11/2025 5:55 PM

‘ಚಿನ್ನ’ ನಿಮ್ಮನ್ನು ಶ್ರೀಮಂತರನ್ನಾಗಿ ಮಾಡಿದೆ! ಸರ್ಕಾರದ ಗೋಲ್ಡ್ ಬಾಂಡ್’ನಿಂದ ಶೇ. 321ರಷ್ಟು ಲಾಭ, ‘RBI’ ಅಂತಿಮ ಬೆಲೆ ಪ್ರಕಟ

13/11/2025 5:53 PM

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ ಹೀಗಿವೆ.!

13/11/2025 5:46 PM

BREAKING: ಚಿತ್ತಾಪುರದಲ್ಲಿ ‘RSS ಪಥಸಂಚಲನ’ಕ್ಕೆ ಸರ್ಕಾರ ಅನುಮತಿಸಿ ಅಧಿಕೃತ ಆದೇಶ

13/11/2025 5:37 PM
State News
KARNATAKA

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ ಹೀಗಿವೆ.!

By kannadanewsnow0913/11/2025 5:46 PM KARNATAKA 2 Mins Read

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬೆಳಗಾವಿ…

BREAKING: ಚಿತ್ತಾಪುರದಲ್ಲಿ ‘RSS ಪಥಸಂಚಲನ’ಕ್ಕೆ ಸರ್ಕಾರ ಅನುಮತಿಸಿ ಅಧಿಕೃತ ಆದೇಶ

13/11/2025 5:37 PM

‘ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆ ಮುಂದುವರೆಯಲು ಹಾದಿ ಸುಲಭ’; ಅಡ್ವೋಕೇಟ್ ಕೆ.ಜನೆರಲ್ ಶಶಿ ಕಿರಣ್ ಶೆಟ್ಟಿ

13/11/2025 5:01 PM

SHOCKING: ಬೆಂಗಳೂರಲ್ಲಿ ಹಾರ್ನ್ ಮಾಡಿದ್ದಕ್ಕೆ ಬೈಕ್ ಗೆ ಕಾರು ಗುದ್ದಿಸಿ ಕೊಲೆಗೆ ಯತ್ನ

13/11/2025 4:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.