ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ನಿಂದ ವ್ಯಕ್ತಿ ಸಾವನ್ನಪ್ಪಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಾವನ್ನಪ್ಪಿದ ಆದೀಲ್ ನ ತಂದೆಯೇ ಇದು ಲಾಕಪ್ ಡೆತ್ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗನ ಸಾವಿಗೆ ಪೊಲೀಸರು ಕಾರಣರಲ್ಲ, ಲೋ ಬಿಪಿಯಾಗಿ ನನ್ನ ಮಗ ಸಾವನ್ನಪ್ಪಿದ್ದಾನೆ. ನನ್ನ ಮಗನ ದೇಹದ ಮೇಲೆ ಯಾವುದೇ ಗಾಯಗಳಿಲ್ಲ ಎಂದು ಆದೀಲ್ ತಂದೆಯೇ ಸ್ಪಷ್ಟನೆ ನೀಡಿದ್ದಾರೆ.
ಚನ್ನಗಿರಿಯ ಟಿಪ್ಪು ನಗರದ ವಾಸಿ ಬಡಿಗೆ ಕೆಲಸಗಾರ ಆದಿಲ್ ಮೃತ ವ್ಯಕ್ತವಾಗಿದ್ದು, ಮಟ್ಕಾ ಚೀಟಿ ಬರೆಯುತ್ತಿದ್ದ ಶಂಕೆ ಮೇರೆ ಪೊಲೀಸರು ಆದಿಲ್ ನನ್ನು ಶುಕ್ರವಾರ ಮಧ್ಯಾಹ್ನ ಠಾಣೆಗೆ ಕರೆತಂದು, ವಿಚಾರಣಗೊಳಪಡಿಸಿದ್ದಾರೆ. ಆದರೆ ವಿಚಾರಣೆ ವೇಳೆ ಲಾಕಪ್ ನಲ್ಲಿದ್ದ ಆದಿಲ್ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಪೊಲೀಸರು ಆತನನ್ನು ಚಿಕಿತ್ಸಗೆಂದು ಆಸ್ಪತ್ರೆಗೆ ಕರೆದೊಯ್ದರಾದರೂ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಇದರಿಂದ ಆಕ್ರೋಶಗೊಂಡ ಕುಟುಂಬಸ್ಥರು, ಸ್ಥಳೀಐರು ಸೇರಿ ಸುಮಾರು ೫೦೦ ಕ್ಕೂ ಹೆಚ್ಚು ಮಂದಿ ಶುಕ್ರವಾರ ರಾತ್ರಿ ಠಾಣೆಯ ಮುಂದೆ ಪ್ರತಿಭಟನೆ ನಡೆರಸಿದ್ದಾರೆ. ಈ ವೇಳೆ ಪೊಲೀಸರು ಠಾಣೆಗೆ ಬಿಗ ಹಾಕಿಕೊಂಡು ಹೋಗಿದ್ದಾರೆ. ಇದರಿಂದ ಆಕ್ರೋಶಗೊಂಡ ಉದ್ರಿಕ್ತರು ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಕಾನ್ಸ್ ಟೇಬಲ್ ಗಳು ಗಾಯಗೊಂಡಿದ್ದರು.