ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೆರಡು ಹೊಸ ದೂರುಗಳ ಬಗ್ಗೆಯೂ ಎಸ್ಐಟಿ ತನಿಖೆ ನಡೆಸಲಿದೆ.
ಧರ್ಮಸ್ಥಳ ಗ್ರಾಮದಲ್ಲಿ ಪೊಲೀಸರು ಈ ಹಿಂದೆ ಪ್ರಕರಣ ದಾಖಲಿಸದೇ ಮೃತದೇಹವೊಂದನ್ನು ಹೂತು ಹಾಕಿದ್ದಾರೆ ಎಂದು ಜಯಂತ ಎಂಬುವರು ಧರ್ಮಸ್ಥಳ ಠಾಣೆಗೆ ದೂರು ಸಲ್ಲಿಸಿದ್ದರು. ಜೊತೆಗೆ, ಜು.31ರಂದು ಆರನೇ ಸ್ಥಳದಲ್ಲಿ ಉತ್ಪನನ ಕಾರ್ಯಾಚರಣೆ ವೇಳೆ ಪತ್ತೆಯಾದ ಅಸ್ಥಿಪಂಜರಕ್ಕೆಸಂಬಂಧಪಟ್ಟಂತೆ ಆ.1ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ. ಈ ಎರಡೂ ಪ್ರಕರಣಗಳನ್ನು ಮುಂದಿನ ತನಿಖೆಗಾಗಿ ಎಸ್ಐಟಿಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ಡಿಜಿಪಿ ಹಾಗೂ ಐಜಿಪಿ ಆದೇಶ ಹೊರಡಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 15 ವರ್ಷಗಳ ಹಿಂದೆ 15 ವರ್ಷದ ಬಾಲಕಿಯ ಶವ ಹೂತು ಹಾಕಿರುವ ಕುರಿತು ಎಸ್ ಐಟಿಗೆ ಸಾಮಾಜಿಕ ಹೋರಾಟಗಾರ ಟಿ. ಜಯಂತ್ ಅವರು ದೂರು ನೀಡಿದ್ದರು. ಇದೀಗ ಡಿಡಿಜಿ& ಐಜಿಪಿ ಡಾ.ಎಂ.ಎಂ. ಸಲೀಂ ಆದೇಶ ಹೊರಡಿಸಿದ್ದಾರೆ.
15 ವರ್ಷದ ಬಾಲಕಿಯ ಶವ ಹೂತಿದ್ದನ್ನು ನಾನು ನೋಡಿದ್ದೇನೆ. ಎಂದು ಅದಕ್ಕೆ ನಾನೇ ಪ್ರತ್ಯಕ್ಷ ಸಾಕ್ಷಿ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 10 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಬೆಳ್ತಂಗಡಿಯಲ್ಲಿರುವ ಎಸ್ ಐಟಿ ಕಚೇರಿಗೆ ಭೇಟಿ ನೀಡಿ ಸಾಮಾಜಿಕ ಹೋರಾಟಗಾರ ಟಿ. ಜಯಂತ್ ಅವರು ದೂರು ನೀಡಿದರು.