ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದ್ದು, ಜೂನ್ 4ರಂದೇ ರಾಜ್ಯ ಸರ್ಕಾರಕ್ಕೆ ಪೊಲೀಸರು ಪತ್ರ ಬರೆದು ಅಪಾಯದ ಎಚ್ಚರಿಕೆ ನೀಡಿದ್ದರು.
ಡಿಸಿಪಿ ಕರಿಬಸವನಗೌಡ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಆರ್ಸಿಬಿ ಅಭಿಮಾನಿಗಳ ಸಂಖ್ಯೆ ದೇಶಾದ್ಯಂತ ಇದೆ. ನಮ್ಮಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ಬಂದೋಬಸ್ತ್ ಗೆ ತೊಂದರೆಯಾಗಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ವಿಧಾನಸೌಧದ ಭವ್ಯ ಮೆಟ್ಟುಲುಗಳ ಮುಂಭಾಗ ಕಾರ್ಯಕ್ರಮವನ್ನು ಆತುರದಲ್ಲಿ ಆಯೋಜಿಸುತ್ತಿರುವುದರಿಂದ ಲಕ್ಷಾಂತರ ಅಭಿಮಾನಿಗಳು ಆಗಮಿಸುವ ಸಾಧ್ಯತೆ ಇದೆ. ಬಂದೋಬಸ್ತ್ ಕರ್ತವ್ಯ ನಿರ್ವಹಣೆಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಡಿಸಿಪಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ.