ಪಟ್ನಾ: ಬಿಹಾರ ರಾಜಕೀಯದಲ್ಲಿ ಹೊಸ ತಲೆಮಾರಿನ ನಾಯಕತ್ವದ ಪರ್ವ ಆರಂಭವಾಗಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಅವರು ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಿದ್ದು, ಜನತಾ ದಳ (ಯುನೈಟೆಡ್) – ಜೆಡಿಯು ಪಕ್ಷದ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ.
ಇಂದು ಪಟ್ನಾದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಅವರು ಪಕ್ಷದ ಸದಸ್ಯತ್ವವನ್ನು ಸ್ವೀಕರಿಸಿದರು. ಕಳೆದ ಕೆಲವು ದಿನಗಳಿಂದ ನಿಶಾಂತ್ ಅವರು ಪಕ್ಷದ ಹಿರಿಯ ನಾಯಕರು ಹಾಗೂ ಶಾಸಕರನ್ನು ಸತತವಾಗಿ ಭೇಟಿಯಾಗುತ್ತಿದ್ದರು. ಈ ಭೇಟಿಗಳ ವೇಳೆ ಪಕ್ಷದ ಭವಿಷ್ಯದ ಯೋಜನೆಗಳು ಮತ್ತು ಸಂಘಟನೆಯ ಬಗ್ಗೆ ಚರ್ಚೆ ನಡೆಸುವ ಮೂಲಕ ತಮ್ಮ ರಾಜಕೀಯ ಆಸಕ್ತಿಯನ್ನು ಅವರು ಹೊರಹಾಕಿದ್ದರು.
ನಿಶಾಂತ್ ಕುಮಾರ್ ಅವರ ಈ ನಡೆ ಬಿಹಾರ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಇದಕ್ಕೆ ಪ್ರಮುಖ ಕಾರಣಗಳೆಂದರೆ. ನಿತೀಶ್ ಕುಮಾರ್ ಅವರ ನಂತರ ಪಕ್ಷವನ್ನು ಮುನ್ನಡೆಸಲು ಮುಂದಿನ ತಲೆಮಾರಿನ ನಾಯಕತ್ವವನ್ನು ಸಿದ್ಧಪಡಿಸುವ ಭಾಗವಾಗಿ ಈ ಬೆಳವಣಿಗೆಯನ್ನು ನೋಡಲಾಗುತ್ತಿದೆ.ಶೀಘ್ರದಲ್ಲೇ ನಿಶಾಂತ್ ಕುಮಾರ್ ಅವರಿಗೆ ಪಕ್ಷದಲ್ಲಿ ಪ್ರಮುಖ ಹುದ್ದೆಯನ್ನು ನೀಡುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಭವಿಷ್ಯದಲ್ಲಿ ಅವರು ಸರ್ಕಾರದಲ್ಲೂ ಮಹತ್ವದ ಸ್ಥಾನ ಅಲಂಕರಿಸಲಿದ್ದಾರೆ ಎಂಬ ಊಹಾಪೋಹಗಳು ದಟ್ಟವಾಗಿವೆ. ಇಲ್ಲಿಯವರೆಗೆ ರಾಜಕೀಯದಿಂದ ದೂರವಿದ್ದ ನಿಶಾಂತ್, ಈಗ ಅಧಿಕೃತವಾಗಿ ಅಖಾಡಕ್ಕಿಳಿದಿರುವುದು ಜೆಡಿಯು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದೆ.
#WATCH | Patna, Bihar: Nishant Kumar, son of CM Nitish Kumar, greets party workers at the Janata Dal (United) office in Patna. He will officially join the party today pic.twitter.com/C78YnfjwaO
— ANI (@ANI) March 8, 2026








