ಮಂಗಳೂರು : ಮಂಗಳೂರಿನಲ್ಲಿ ಭೀಕರವಾದಂತಹ ರಸ್ತೆ ಅಪಘಾತವಾಗಿದ್ದು, ವೇಗವಾಗಿ ಹೋಗುತ್ತಿದ್ದ ಬೈಕ್ ಒಂದು ಸ್ಕಿಡ್ ಆಗಿ ಬಿದ್ದಿದೆ. ಈ ವೇಳೆ ಹಿಂದಿನಿಂದ ಬಂದಂತಹ ಲಾರಿ ಬೈಕ್ ಸವಾರ ಮೇಲೆ ಹರಿದು ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಕಾವೂರು ಜಂಕ್ಷನ್ ಬಳಿ ನಡೆದಿದೆ.
ಮೃತ ಬೈಕ್ ಸವಾರನನ್ನು ಪ್ರಕಾಶ್ ಅಂಚನ್ ಎಂದು ಗುರುತಿಸಲಾಗಿದೆ. ಪ್ರಕಾಶ್ ಬೈಕ್ ಮೇಲೆ ಮರಕಡ ಕಡೆಯಿಂದ ಕಾವೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ ರಸ್ತೆ ಮೇಲೆ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಹಿಂದಿನಿಂದ ವೇಗವಾಗಿ ಬಂದಂತಹ ಲಾರಿ ಅವರ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಅಪಘಾತದ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.