ಬೆಂಗಳೂರು: ಅಬಕಾರಿ ಇಲಾಖೆ ಹಗರಣದಲ್ಲಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ ಅಹೋರಾತ್ರಿ ಧರಣಿಗೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಅಹೋರಾತ್ರಿ ಧರಣಿ ನಡೆಸಿದ್ದಾರೆ.
ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸಿದ್ದು, ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿಗೆ ನಿರ್ಧರಿಸಿದ್ದಾರೆ. ಅಹೋರಾತ್ರಿ ಧರಣಿಗೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಅಶೋಕ್ ಪಟ್ಟಣ್ ಮಾಹಿತಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿಧಾನಸೌಧದಿಂದ ನಿರ್ಗಮಿಸುವಾಗ ಅಹೋರಾತ್ರಿ ಧರಣಿ ಬಗ್ಗೆ ಮಾಹಿತಿ ನೀಡಲಾಗಿದೆ.
ಈ ಕುರಿತು ಬಿಜೆಪಿ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದು, ಅಬಕಾರಿ ಸಚಿವರ ಮೇಲೆ ನೇರ ಆರೋಪವಿದ್ದರೂ ರಾಜೀನಾಮೆ ಪಡೆಯದೆ ಸಚಿವರ ಬೆನ್ನಿಗೆ ನಿಂತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಸಿರುವ ಅಬಕಾರಿ ಸಚಿವರ ರಾಜೀನಾಮೆ ಪಡೆಯುವಂತೆ ಪ್ರತಿಪಕ್ಷ ನಾಯಕರಾದ ಆರ್. ಅಶೋಕ್ ಮತ್ತು ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಶಾಸಕರು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಅಬಕಾರಿ ಸಚಿವರು ರಾಜೀನಾಮೆ ನೀಡುವವರೆಗೆ ಅಹೋರಾತ್ರಿ ಪ್ರತಿಭಟಿಸುತ್ತೇವೆ ಎಂದು ಬಿಜೆಪಿ ಹೇಳಿದೆ.
ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ.#CongressFailsKarnataka#CongressLootsKarnataka pic.twitter.com/AZtNnNxTwg
— BJP Karnataka (@BJP4Karnataka) February 3, 2026
ಭ್ರಷ್ಟ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ವತಿಯಿಂದ ಅಹೋರಾತ್ರಿ ಪ್ರತಿಭಟನೆ !
ಅಬಕಾರಿ ಸಚಿವರ ಮೇಲೆ ನೇರ ಆರೋಪವಿದ್ದರೂ ರಾಜೀನಾಮೆ ಪಡೆಯದೆ ಸಚಿವರ ಬೆನ್ನಿಗೆ ನಿಂತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಸಿರುವ ಅಬಕಾರಿ ಸಚಿವರ ರಾಜೀನಾಮೆ ಪಡೆಯುವಂತೆ ಪ್ರತಿಪಕ್ಷ ನಾಯಕರಾದ ಶ್ರೀ… pic.twitter.com/LLIcqO5SEF
— BJP Karnataka (@BJP4Karnataka) February 3, 2026








