ದಾವಣಗೆರೆ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮತ್ತೊಂದು ಬಿಗ್ ಪ್ಲಾನ್ ಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಠಾವೋ ಎಂಬ ಅಭಿಯಾನ ಆರಂಭ ಮಾಡುವ ಕುರಿತು ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಹೌದು ದಾವಣಗೆರೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹಠಾವೋ ಆರಂಭದ ಕುರಿತು ಯತ್ನಾಳ ನೇತ್ರತ್ವದಲ್ಲಿ ಜೆಐಎಂಟಿ ಸಭಾಂಗಣದಲ್ಲಿ ಸಭೆ ನಡೆಯುತ್ತಿದೆ. ಬಿಜೆಪಿ ಮಾಜಿ ಸಂಸಾರದ ಪ್ರತಾಪ್ ಸಿಂಹ, ಜಿ.ಎಂ ಸಿದ್ದೇಶ್ವರ ಹಾಗೂ ಹರಿಹರದ ಬಿಜೆಪಿ ಶಾಸಕ ಹರೀಶ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಜಿಎಂಐಟಿ ಅತಿಥಿ ಗೃಹದ ವಿಐಪಿ ರೂಮ್ನಲ್ಲಿ ಗುಪ್ತವಾಗಿ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಒಂದು ಬಂಡಾಯ ನಾಯಕರ ಸಭೆಗೆ ರಮೇಶ್ ಜಾರಕಿಹೊಳಿ ಗೈರಾಗಿದ್ದಾರೆ.ಈಗಾಗಲೇ ಬೆಳಗಾವಿ, ಬೆಂಗಳೂರು ಸೇರಿದಂತೆ ಹಲವು ಕಡೆ ಸಭೆ ನಡದಿತ್ತು. ದಾವಣಗೆರೆಯಲ್ಲಿ ಬಿಜೆಪಿ ಬಂಡಾಯ ನಾಯಕರ ಗುಪ್ತ ಸಭೆ ನಡೆದಿದೆ. ಸಭೆಯ ಬಳಿಕ ಬಂಡಾಯ ನಾಯಕರು ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.