ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಳೆ ಹೆಚ್ಚಾಗುತ್ತಿದೆ. ಈಗಾಗಲೇ ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಈ ಒಂದು ಮಹಾ ಮಳೆಗೆ ಹಲವು ಜಿಲ್ಲೆಗಳಲ್ಲಿ ಭಾರಿ ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ ಇಂದು ಮಳೆ ಹಾಗೂ ರಸ್ತೆ ಅಪಘಾತಗಳಂತಹ ಪ್ರಕರಣದಲ್ಲಿ ಒಟ್ಟು 12 ಮಂದಿ ಮೃತಪಟ್ಟಿದ್ದಾರೆ.
ಹೌದು ಮಂಗಳೂರಿನ ಉಳ್ಳಾಲದಲ್ಲಿ ಭಾರೀ ಮಳೆಯಿಂದಾಗಿ ಮುಂಜಾನೆ 4 ಗಂಟೆ ಸುಮಾರಿಗೆ ಮನೆ ಮೇಲೆ ಗುಡ್ಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಇನ್ನು ನೇರಳಕಟ್ಟೆಯಲ್ಲಿ ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು 6 ವರ್ಷದ ಫಾತಿಮಾ ನಯೀಮ್ ಸಾವನಪ್ಪಿದ್ದಾಳೆ. ಅಲ್ಲದೆ ಮಂಗಳೂರಲ್ಲಿ ಮೀನುಗಾರಿಕೆಗೆ ತೆರಳಿದ ವೇಳೆ ಹಡಗು ಮಗುಚಿ ಇಬ್ಬರು ಮೀನುಗಾರರು ನೀರು ಪಾಲಾಗಿ ಸಾವನಪ್ಪಿದ್ದಾರೆ. ಇನ್ನು ಇದೇ ಜಿಲ್ಲೆಯಲ್ಲಿ ಲೈನ್ ದುರಸ್ತಿ ಮಾಡುವ ವೇಳೆ ಮೆಸ್ಕಾಂ ನೌಕರರ ವಿದ್ಯುತ್ ತಗುಲಿ ಸಾವನಪ್ಪಿದ್ದಾನೆ.
ಇತ್ತ ದಾವಣಗೆರೆಯಲ್ಲಿ ಕಾರುಗಳ ನಡುವೆ ಡಿಕ್ಕಿಯಾಗಿ ವೃದ್ಧೆ ಮೃತಪಟ್ಟಿದ್ದಾರೆ. ಇನ್ನು ಚಿಕ್ಕಬಳ್ಳಾಪುರದಲ್ಲಿ ನೀರಿನ ಹೊಂಡಕ್ಕೆ ಕಾರು ಬಿದ್ದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದಾನೆ. ಹುಬ್ಬಳ್ಳಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಕಲಬುರಗಿಯಲ್ಲಿ ಹಿಟ್ ಆಯಂಡ್ ರನ್ಗೆ ವೃದ್ಧ ಬಲಿಯಾಗಿದ್ದಾರೆ.