ಬೆಂಗಳೂರು : ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 75 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಹೆಚ್ ಎಎಲ್ ಏರ್ ಪೋರ್ಟ್ ಮುಖ್ಯ ಗೇಟ್ ಬಳಿ 75 ಪ್ರಯಾಣಿಕರಿದ್ದ ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಎಚ್ಚೆತ್ತ ನಿರ್ವಾಹಕರು ಎಲ್ಲಾ ಪ್ರಯಾಣಿಕರನ್ನು ಬಸ್ ನಿಂದ ಕೆಳಗಿಳಿಸಿದ್ದಾರೆ.
ಬೆಳಗ್ಗಿನ ಜಾವ 5:10ಕ್ಕೆ ಅಗ್ನಿ ದುರಂತ ಸಂಭವಿಸಿದೆ. ದುರಂತಕ್ಕೀಡಾದ ಬಸ್ (ಸಂಖ್ಯೆ KA57 F 4568) ಮೆಜೆಸ್ಟಿಕ್ನಿಂದ ಕಾಡುಗೋಡಿಗೆ ತೆರಳುತ್ತಿತ್ತು. ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಗೆ ಹರಡಿದೆ. ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದೆ. ಹೆಚ್ಎಲ್ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.